ಇನ್ನೊಂದು ಅಕ್ಷರಂಗಳ

"ಸುಪ್ತದೀಪ್ತಿ"ಯ ಕಿಟಕಿ->->->

Thursday 22 May, 2008

ಸುರಸುಮಸಮ

ನವಿರುನಿಶೆಯಲಿ ಚಿಮ್ಮಿತ್ತು
ಜೀವ ಚೇತನ ಸ್ಫೂರ್ತಿ
ಯಾವ ಲಾಸ್ಯಕೆ ಒಲಿದಿತ್ತು
ಮೊಗ್ಗಾಗಲಿಹ ಮೂರ್ತಿ

ಹಸಿರು ಹೊದ್ದೇ ಎದ್ದಿದೆ
ಬೆವರು ಮೆದ್ದ ಚಿಗುರು
ಭಾವ ಭಂಗಿಯ ಬಿತ್ತಿದೆ
ಭಿತ್ತಿಯೊಳಗೆ ಉಸಿರು

ಹಿಮಸಿಂಚನ ರೋಮಾಂಚನ
ರಮ್ಯ ರವಿಯ ಸ್ಪರ್ಶ
ಸುರಸುಮವದು ಧರೆಗಿಳಿಯಿತು
ಸೆಳೆದು ಸಕಲಾಕರ್ಷ

ಪಕಳೆಯರಳಿತು ತೆರೆಯಿತು
ಗಂಧ ಚೆಲ್ಲಿ ಮುಗುಳು
ಹಾಸ ಕೋಟಿಯ ಹರಡಿತು
ಬಂಧ ಕಳೆದ ಮರುಳು
(೨೧-ಮೇ-೨೦೦೬)

2 comments:

sunaath said...

ಭಲೆ ಜ್ಯೋತಿ, ಭಲೆ. ಕಾವ್ಯ ನಿನ್ನ ಹೃದಯದಲ್ಲಿ ನೆಲೆಸಿದೆ. ಸರಾಗವಾಗಿ ಹೊರಬರುತ್ತದೆ.
-ಸುನಾಥ ಕಾಕಾ

ಸುಪ್ತದೀಪ್ತಿ suptadeepti said...

ಸುನಾಥ ಕಾಕಾ, ನೀವು ಹೀಗೆ ಹೊಗಳಿದ್ರೆ ಹೇಗೆ? ನನಗೆ ತುಂಬಾ ಸಂಕೋಚವಾಗುತ್ತೆ. ಧನ್ಯವಾದಗಳು ಮೆಚ್ಚಿದ್ದಕ್ಕೆ.