ಇನ್ನೊಂದು ಅಕ್ಷರಂಗಳ

"ಸುಪ್ತದೀಪ್ತಿ"ಯ ಕಿಟಕಿ->->->

Sunday 29 June, 2008

ನಲ್ನುಡಿ

ಎರಡು ಮಾತು ಹೇಳುವೆನು
ಕೇಳು ಜಾಣ ಮಗು ನೀನು
ಒಳ್ಳೆ ನಡೆ ನುಡಿಯ ಕಲಿ
ಧೀರನಾಗು ಬಾಳಲಿ

ಗುರುಗಳು ಹಿರಿಯರು ನಿನಗೆ
ಕೆಡುಕನು ಬಯಸುವುದಿಲ್ಲ
ಅರಿವಿನ ಮಾರ್ಗವ ತೋರಿ
ವಿಜಯವ ಹರಸುವರೆಲ್ಲ
ಹೇಳಿದ ಮಾತನು ಕೇಳಿ
ನೂರಾರು ಕಾಲ ಬಾಳಿ
ಯಶವೆಂಬ ಏಣಿಯನೇರು

ವಂಚನೆ ಜಗಳ ಕದನ
ಒಳ್ಳೆಯ ಸಂಸ್ಕೃತಿಯಲ್ಲ
ಸಂಚು ಸುಲಿಗೆಯ ಮಾಡೋ
ಮನುಜ ಸುಸಂಸ್ಕೃತನಲ್ಲ
ಸತ್ಯವ ಬಿಡದೆ ಎಲ್ಲೆಲ್ಲೂ
ಹಿಂಸೆಯ ಎದುರಿಸಿ ನಿಲ್ಲು
ಆದರ್ಶ ಮಾನವನಾಗು

"ದೂರದ ಬೆಟ್ಟವು ಹಸಿರು"
ಗಾದೆಯ ಮಾತಿದು ಕೇಳು
ಸರಿದು ಸನಿಹದೆ ನೋಡು
ತಿಳಿವುದು ಒಳಗಿನ ಪೊಳ್ಳು
ಬಣ್ಣದ ಮೆರುಗಿಗೆ ಸೋತು
ನಿನ್ನತನವನೇ ಮರೆತು
ಸುಳಿಯಲ್ಲಿ ಸಿಲುಕದೆ ಬಾಳು
(ಎಪ್ರಿಲ್-೧೯೯೫)