ಎರಡು ಮಾತು ಹೇಳುವೆನು
ಕೇಳು ಜಾಣ ಮಗು ನೀನು
ಒಳ್ಳೆ ನಡೆ ನುಡಿಯ ಕಲಿ
ಧೀರನಾಗು ಬಾಳಲಿ
ಗುರುಗಳು ಹಿರಿಯರು ನಿನಗೆ
ಕೆಡುಕನು ಬಯಸುವುದಿಲ್ಲ
ಅರಿವಿನ ಮಾರ್ಗವ ತೋರಿ
ವಿಜಯವ ಹರಸುವರೆಲ್ಲ
ಹೇಳಿದ ಮಾತನು ಕೇಳಿ
ನೂರಾರು ಕಾಲ ಬಾಳಿ
ಯಶವೆಂಬ ಏಣಿಯನೇರು
ವಂಚನೆ ಜಗಳ ಕದನ
ಒಳ್ಳೆಯ ಸಂಸ್ಕೃತಿಯಲ್ಲ
ಸಂಚು ಸುಲಿಗೆಯ ಮಾಡೋ
ಮನುಜ ಸುಸಂಸ್ಕೃತನಲ್ಲ
ಸತ್ಯವ ಬಿಡದೆ ಎಲ್ಲೆಲ್ಲೂ
ಹಿಂಸೆಯ ಎದುರಿಸಿ ನಿಲ್ಲು
ಆದರ್ಶ ಮಾನವನಾಗು
"ದೂರದ ಬೆಟ್ಟವು ಹಸಿರು"
ಗಾದೆಯ ಮಾತಿದು ಕೇಳು
ಸರಿದು ಸನಿಹದೆ ನೋಡು
ತಿಳಿವುದು ಒಳಗಿನ ಪೊಳ್ಳು
ಬಣ್ಣದ ಮೆರುಗಿಗೆ ಸೋತು
ನಿನ್ನತನವನೇ ಮರೆತು
ಸುಳಿಯಲ್ಲಿ ಸಿಲುಕದೆ ಬಾಳು
(ಎಪ್ರಿಲ್-೧೯೯೫)
ಇನ್ನೊಂದು ಅಕ್ಷರಂಗಳ
"ಸುಪ್ತದೀಪ್ತಿ"ಯ ಕಿಟಕಿ->->->
Sunday 29 June, 2008
Subscribe to:
Posts (Atom)