ಧಾನ್ಯಲಕ್ಷ್ಮಿ ಭೂಮಿತಾಯಿ ಧೈರ್ಯಲಕ್ಷ್ಮಿ ಮೋಹ ಮಾಯೆ
ಜ್ಞಾನದಾತೆ ಪೂಜ್ಯಮಾತೆ ಪಾಪನಾಶಿ ಸುರಭಿಯೆ
ಎನುತ ಹೊಗಳಿ ಹಾಡೊ ಮನುಜ ಹೇಳು ಎಲ್ಲಿದೆ
ಈ ಹಿರಿಮೆ ಹೆಣ್ಣಿಗೆ?
ಬಾಳ ಬೆಳಕು ಮನೆಯ ಥಳಕು ಪ್ರೇಮ ಗಂಗೆ ಎನ್ನುವೆ
ಬಾಳ ಏಣಿಯಲ್ಲಿ ಮೇಲೆ ಏರಗೊಡದೆ ತುಳಿಯುವೆ
ತೊಳೆಯಲೊಲ್ಲೆ "ಅಳುವ ಅಬಲೆ" ಎನುವ ಮಾತನು
ಅಳೆಯಬಲ್ಲೆಯಾ ಜನನಿ ತೋಳನು!
ಚೆಲುವ ಮೂರ್ತಿ ಕಾವ್ಯ ಸ್ಫೂರ್ತಿ ಕರುಣೆ ಕಡಲು ಎನ್ನುವೆ
ಒಲುಮೆ ಬೇಡಿ ತೊಡಿಸಿ ಅವಳ ಸೆರೆಯ ಒಳಗೆ ಇರಿಸುವೆ
ನಲಿವ ಹೂವು ನಲುಗಿ ಬಳಲಿ ಬಾಡಿ ಬಾಗಿತು
ನೆಲವ ಸೇರಿತು, ಅಮರವಾಯಿತು!
(ಜೂನ್-೧೯೯೫)
ಇನ್ನೊಂದು ಅಕ್ಷರಂಗಳ
"ಸುಪ್ತದೀಪ್ತಿ"ಯ ಕಿಟಕಿ->->->
Sunday 13 July, 2008
Subscribe to:
Posts (Atom)