ಕಾಯೇ ನಮ್ಮನು ಸರಸ್ವತಿ
ಕತ್ತಲ ಹರಿಸಿ ಕೊಡು ನೀ ಸನ್ಮತಿ ||ಪ||
ಹಂಸ ವಾಹಿನಿ, ಸರಸಿಜ ಮೋಹಿನಿ
ಮನಸಿಜನಗ್ರಜನರಸೀ |
ಅಕ್ಷರ ಜನನಿ, ಜ್ಞಾನಪ್ರದಾಯಿನಿ
ಮಂದಹಾಸಿ ಮೃದುಭಾಷೀ ||ಚರಣ-೧||
ಶ್ವೇತವಸನೇ ಶುಕ್ಲಾಭರಣೇ
ಚಂದ್ರ ಕಾಂತಿ ಪ್ರಭಾಸೇ |
ವೀಣಾ ಸ್ಫಟಿಕಮಣಿ ಪುಸ್ತಕ ಪಾಣೀ
ಕಾವ್ಯಗಾಯನ ಪ್ರೀತೇ ||ಚರಣ-೨||
ಹರಸೇ ತಾಯೇ, ಅಂಬುಜಾಸನೇ
ಅಂಬುಜದಳ ನೇತ್ರೇ |
ಸಲಹೇ ತಾಯೇ, ಮಂಗಳದಾಯಿನೀ
ಅಜಪ್ರಿಯೇ ಶುಭ ಗಾತ್ರೇ ||ಚರಣ-೩||
(೫-ಸೆಪ್ಟೆಂಬರ್-೨೦೦೫ - ೪-ಜೂನ್-೨೦೦೮)
ಇನ್ನೊಂದು ಅಕ್ಷರಂಗಳ
"ಸುಪ್ತದೀಪ್ತಿ"ಯ ಕಿಟಕಿ->->->
Saturday, 26 September 2009
Friday, 18 September 2009
ಕೂಸು ಮನ
ಅರುಣ ರವಿ ರಾಗಕ್ಕೆ ಹೊಳೆದು ನರ್ತಿಸುತಿದ್ದ
ಹುಲ್ಲಂಚ ಮಿಂಚನ್ನು ತೊರೆದೆವೇಕೆ?
ಪುಟಿ-ಪುಟಿದು ಏಳುತ್ತ ಆಗಸಕೆ ಹಾರುತ್ತ
ಅರಳಿ ಬೆಳೆಯುವ ಚಿಗುರ ಮರೆತೆವೇಕೆ?
ಹಾಲುಗಲ್ಲದ ಮೇಲೆ ಇಟ್ಟ ಬೆಟ್ಟನು ಸರಿಸಿ
ದಿಟ್ಟಿ ಸೋಕದ ಬೊಟ್ಟನಿಟ್ಟೆವೇಕೆ?
ಕೌತುಕವ ಸೋಜಿಗವ ಕಣ್ಣಂಚಿನಲೆ ಸವರಿ
ತುರಗ ಪಟ್ಟಿಯನಡ್ಡ ಕೊಟ್ಟೆವೇಕೆ?
ಬಿಂಬವಿಲ್ಲದ ಗುಡಿಗೆ ಮೂರ್ತತೆಯ ಸ್ವಾಗತಿಸಿ
ಅಷ್ಟಬಂಧಗಳಿಂದ ಬಿಗಿದೆವೇಕೆ?
ಸ್ತಂಭಗಳ ಅರಮನೆಯ ತುಂಬ ತುಂಬಿದೆ ಸರಕು
ಬಹಿರಂತರಂಗದಲಿ ಕೋಟೆಯೇಕೆ?
ಅನುದಿನವು ಸುಪ್ರಭೆಯ ಹೀರುವೆಲೆ ಹಸುರಂತೆ
ಕೂಸು-ಮನವಿರಲೆಮಗೆ ಮುಪ್ಪದೇಕೆ?
(೨೪-ಆಗಸ್ಟ್-೨೦೦೪)
ಹುಲ್ಲಂಚ ಮಿಂಚನ್ನು ತೊರೆದೆವೇಕೆ?
ಪುಟಿ-ಪುಟಿದು ಏಳುತ್ತ ಆಗಸಕೆ ಹಾರುತ್ತ
ಅರಳಿ ಬೆಳೆಯುವ ಚಿಗುರ ಮರೆತೆವೇಕೆ?
ಹಾಲುಗಲ್ಲದ ಮೇಲೆ ಇಟ್ಟ ಬೆಟ್ಟನು ಸರಿಸಿ
ದಿಟ್ಟಿ ಸೋಕದ ಬೊಟ್ಟನಿಟ್ಟೆವೇಕೆ?
ಕೌತುಕವ ಸೋಜಿಗವ ಕಣ್ಣಂಚಿನಲೆ ಸವರಿ
ತುರಗ ಪಟ್ಟಿಯನಡ್ಡ ಕೊಟ್ಟೆವೇಕೆ?
ಬಿಂಬವಿಲ್ಲದ ಗುಡಿಗೆ ಮೂರ್ತತೆಯ ಸ್ವಾಗತಿಸಿ
ಅಷ್ಟಬಂಧಗಳಿಂದ ಬಿಗಿದೆವೇಕೆ?
ಸ್ತಂಭಗಳ ಅರಮನೆಯ ತುಂಬ ತುಂಬಿದೆ ಸರಕು
ಬಹಿರಂತರಂಗದಲಿ ಕೋಟೆಯೇಕೆ?
ಅನುದಿನವು ಸುಪ್ರಭೆಯ ಹೀರುವೆಲೆ ಹಸುರಂತೆ
ಕೂಸು-ಮನವಿರಲೆಮಗೆ ಮುಪ್ಪದೇಕೆ?
(೨೪-ಆಗಸ್ಟ್-೨೦೦೪)
Labels:
'ಭಾವಬಿಂಬ'ದಿಂದ,
ಆತ್ಮ ಚಿಂತನ...,
ರಿಗ್ರೆಷನ್,
ಹೀಗೇ ಸಾಗಲಿ
Saturday, 12 September 2009
ವಿಲಾಪ
ರಾಧೆ ರಾಧೇ ಎನದೆ ಅರೆಘಳಿಗೆಯೂ ಇರದೆ
ರಮಿಸಿ ಕಾಡಿದ ನನಗೆ ಏನಾಯಿತೋ
ರಾಧೆಯಾ ನೆರಳಿರದೆ ಗೆಜ್ಜೆಯಾ ದನಿಯಿರದೆ
ರಂಗಿನಾಟದ ಹುರುಪು ಹಾಳಾಯಿತೋ
ಕಿರಿಯನೆಂದೆಲ್ಲರೂ ಹಿರಿತನವನಾಡುತ್ತ
ಕೀಟಲೆಯನಾಡ್ಯಾಡಿ ಕೆಣಕುತಿರಲು
ಕಿನ್ನರಿಯ ಲೀಲೆಯಲಿ ಪ್ರೀತಿಯಲಿ ಕಾಯುತ್ತ
ಕಿಂಕಿಣಿಯನಾಡಿ ನೀ ಮನವ ಗೆಲಲು
ಹಾಲುಮೊಸರನು ಮೆಚ್ಚಿ ಬೆಣ್ಣೆಬೆಟ್ಟವನೆತ್ತಿ
ಹಸುಮಂದೆಯಲಿ ಕರುಗಳೊಡನಾಡುತ
ಹಾಲಾಹಲವ ಸುರಿವ ಹಾವ ಹೆಡೆಯನು ಮೆಟ್ಟಿ
ಹಾಡಿ ಆಡಿದ ನನ್ನ ಜೀವ ಗೆಣತಿ
ಮಾವ ಕರೆದನು ಎಂದು ಮನೆಯ ತೊರೆದೆನು ಅಂದು
ಮರೆಯುವೆನು ಹೇಗೆ ನಾ ಮನದಂಗಳ
ಮಾಳಿಗೆಯಲೇ ನಿಂದು ಪರದೆ ಹಿಂದೆಯೆ ನೊಂದು
ಮಾತು ಮರೆಸಿದೆ, ತುಳುಕಿಸದೆ ಕಂಗೊಳ
ಒಮ್ಮೆಯಾದರು ಬಂದು ನಿನ್ನ ಕಾಂಬೆನು ಎಂದು
ಒಂದಾಸೆ ಹೊತ್ತಿದ್ದೆ ಅರಮನೆಯಲಿ
ಒರಗುದಿಂಬಿನ ಪೀಠ ನನಗೆ ಅಂಟಿದೆಯೆಂದು
ಒಣನೆಪವು ಎಳೆಯಿತದು ಬಿಡು ಭರದಲಿ
ಪಂಚಬಾಣನ ಮಿತ್ರ ಯುದ್ಧಸಾರುವ ಹೊತ್ತು
ಪೂರ್ಣ ಚಂದಿರನೊಳಗೆ ಕೋಲಾಹಲ
ಪಚ್ಚೆಪಸರಿದ ಬಯಲು ಎದೆಗೆ ಬಾಣವನಿತ್ತು
ಪ್ರಾಣ ಬೇಡಲು ನೆನಪು ದಾವಾನಲ
ರಾಜಕಾರಣ ಬೇಡ ರಾಜ್ಯಭಾರವು ಬೇಡ
ರಾಧೆ, ನಿನ್ನಯ ಪ್ರೇಮವೊಂದು ಸಿಗಲಿ
ರಾಶಿ ಹೊನ್ನೂ ಬೇಡ ರಾಯತನವೂ ಬೇಡ
ರಾಧೆ, ಯಮುನೆಯ ತಟವು ನಮಗೆ ಇರಲಿ
(೧೬-ಎಪ್ರಿಲ್-೨೦೦೯)
ರಮಿಸಿ ಕಾಡಿದ ನನಗೆ ಏನಾಯಿತೋ
ರಾಧೆಯಾ ನೆರಳಿರದೆ ಗೆಜ್ಜೆಯಾ ದನಿಯಿರದೆ
ರಂಗಿನಾಟದ ಹುರುಪು ಹಾಳಾಯಿತೋ
ಕಿರಿಯನೆಂದೆಲ್ಲರೂ ಹಿರಿತನವನಾಡುತ್ತ
ಕೀಟಲೆಯನಾಡ್ಯಾಡಿ ಕೆಣಕುತಿರಲು
ಕಿನ್ನರಿಯ ಲೀಲೆಯಲಿ ಪ್ರೀತಿಯಲಿ ಕಾಯುತ್ತ
ಕಿಂಕಿಣಿಯನಾಡಿ ನೀ ಮನವ ಗೆಲಲು
ಹಾಲುಮೊಸರನು ಮೆಚ್ಚಿ ಬೆಣ್ಣೆಬೆಟ್ಟವನೆತ್ತಿ
ಹಸುಮಂದೆಯಲಿ ಕರುಗಳೊಡನಾಡುತ
ಹಾಲಾಹಲವ ಸುರಿವ ಹಾವ ಹೆಡೆಯನು ಮೆಟ್ಟಿ
ಹಾಡಿ ಆಡಿದ ನನ್ನ ಜೀವ ಗೆಣತಿ
ಮಾವ ಕರೆದನು ಎಂದು ಮನೆಯ ತೊರೆದೆನು ಅಂದು
ಮರೆಯುವೆನು ಹೇಗೆ ನಾ ಮನದಂಗಳ
ಮಾಳಿಗೆಯಲೇ ನಿಂದು ಪರದೆ ಹಿಂದೆಯೆ ನೊಂದು
ಮಾತು ಮರೆಸಿದೆ, ತುಳುಕಿಸದೆ ಕಂಗೊಳ
ಒಮ್ಮೆಯಾದರು ಬಂದು ನಿನ್ನ ಕಾಂಬೆನು ಎಂದು
ಒಂದಾಸೆ ಹೊತ್ತಿದ್ದೆ ಅರಮನೆಯಲಿ
ಒರಗುದಿಂಬಿನ ಪೀಠ ನನಗೆ ಅಂಟಿದೆಯೆಂದು
ಒಣನೆಪವು ಎಳೆಯಿತದು ಬಿಡು ಭರದಲಿ
ಪಂಚಬಾಣನ ಮಿತ್ರ ಯುದ್ಧಸಾರುವ ಹೊತ್ತು
ಪೂರ್ಣ ಚಂದಿರನೊಳಗೆ ಕೋಲಾಹಲ
ಪಚ್ಚೆಪಸರಿದ ಬಯಲು ಎದೆಗೆ ಬಾಣವನಿತ್ತು
ಪ್ರಾಣ ಬೇಡಲು ನೆನಪು ದಾವಾನಲ
ರಾಜಕಾರಣ ಬೇಡ ರಾಜ್ಯಭಾರವು ಬೇಡ
ರಾಧೆ, ನಿನ್ನಯ ಪ್ರೇಮವೊಂದು ಸಿಗಲಿ
ರಾಶಿ ಹೊನ್ನೂ ಬೇಡ ರಾಯತನವೂ ಬೇಡ
ರಾಧೆ, ಯಮುನೆಯ ತಟವು ನಮಗೆ ಇರಲಿ
(೧೬-ಎಪ್ರಿಲ್-೨೦೦೯)
Labels:
ರಮ್ಯಗಾನ...,
ಹೀಗೇ ಸಾಗಲಿ,
ಹೊಚ್ಚ ಹೊಸದು
Friday, 4 September 2009
ನನ್ನ ಮನೆಯಲ್ಲಿ...
ನನ್ನ ಮನೆಯಲ್ಲೇ ನಾನು ಪರಕೀಯ;
ಅಪ್ಪನ ಮಾತಿಗೆ ಎದುರಾಡದೆ-
ಅಣ್ಣ-ತಮ್ಮರ ದನಿಗೆ ದನಿಗೊಡದೆ-
ಹೊಸಿಲ ಹೊರಗುರುಳಿ, ಮರಳಿ-
ಬಂದು ಹೋಗುತಿಹ ನೆಂಟ.
ನನ್ನ ಮನೆಯಲ್ಲೇ ನಾನು ಬಲುಸ್ವಾರ್ಥಿ;
ಬೆಳಕಿರದ ಸೂರಿಗೆ ದೀಪ ತೂಗಿಸಿ-
ಬೆಡಗಿರದ ಗೋಡೆಗೆ ಬಣ್ಣ ಅಂಟಿಸಿ-
ಅಂಗಳ ಬೆಳೆಯಿಸಿ, ಅರಳಿಸಿ-
ಅಂದ ತೋರಿಸಿದ ಬಂಟ.
ನನ್ನ ಮನೆಯಲ್ಲೇ ನಾನು ಕಡುದೋಷಿ;
ಸರಿದಾರಿ ತೋರಿ ಒಂದಿಷ್ಟು ಗದರಿ-
ಸಂಯಮದ ಪಾಠ ಮತ್ತಷ್ಟು ಒದರಿ-
ಕಿರಿಯರ ಕೈ ಹಿಡಿದು ನಡೆದು-
ಮುಂದೆ ಸಾಗಿಸಿದ ಕುಂಟ.
ನನ್ನ ಮನೆಯಲ್ಲೇ ನಾನು ಹುಚ್ಚಾತ್ಮ;
ಉಂಡೆಯಾ, ಉಟ್ಟೆಯಾ, ಅನ್ನದವರೊಳಗೆ-
ಉಸಿರಿನ ಕೋಟೆಯ ಪಿಸುದನಿಗಳೊಳಗೆ-
ಕಟಕಿಯನು ಕಂಡೂ ಕಾಣದ-
ನಗೆ-ಕಾಯಕದ ಒಂಟಿ.
(ಹುಟ್ಟಿ-ಬೆಳೆದ ಮನೆಗಾಗಿ ಸ್ವಂತ ಸಂಸಾರವನ್ನೂ ಕಡೆಗಣಿಸಿ, ತನ್ನದೆಲ್ಲವನ್ನೂ ಧಾರೆಯೆರೆದು, ಬಾಳು ಸಾಗಿಸುವ ‘ಪರಕೀಯ ಆತ್ಮ’ರಿಗಾಗಿ....)
(೨೫-ಫ಼ೆಬ್ರವರಿ-೨೦೦೪)
ಅಪ್ಪನ ಮಾತಿಗೆ ಎದುರಾಡದೆ-
ಅಣ್ಣ-ತಮ್ಮರ ದನಿಗೆ ದನಿಗೊಡದೆ-
ಹೊಸಿಲ ಹೊರಗುರುಳಿ, ಮರಳಿ-
ಬಂದು ಹೋಗುತಿಹ ನೆಂಟ.
ನನ್ನ ಮನೆಯಲ್ಲೇ ನಾನು ಬಲುಸ್ವಾರ್ಥಿ;
ಬೆಳಕಿರದ ಸೂರಿಗೆ ದೀಪ ತೂಗಿಸಿ-
ಬೆಡಗಿರದ ಗೋಡೆಗೆ ಬಣ್ಣ ಅಂಟಿಸಿ-
ಅಂಗಳ ಬೆಳೆಯಿಸಿ, ಅರಳಿಸಿ-
ಅಂದ ತೋರಿಸಿದ ಬಂಟ.
ನನ್ನ ಮನೆಯಲ್ಲೇ ನಾನು ಕಡುದೋಷಿ;
ಸರಿದಾರಿ ತೋರಿ ಒಂದಿಷ್ಟು ಗದರಿ-
ಸಂಯಮದ ಪಾಠ ಮತ್ತಷ್ಟು ಒದರಿ-
ಕಿರಿಯರ ಕೈ ಹಿಡಿದು ನಡೆದು-
ಮುಂದೆ ಸಾಗಿಸಿದ ಕುಂಟ.
ನನ್ನ ಮನೆಯಲ್ಲೇ ನಾನು ಹುಚ್ಚಾತ್ಮ;
ಉಂಡೆಯಾ, ಉಟ್ಟೆಯಾ, ಅನ್ನದವರೊಳಗೆ-
ಉಸಿರಿನ ಕೋಟೆಯ ಪಿಸುದನಿಗಳೊಳಗೆ-
ಕಟಕಿಯನು ಕಂಡೂ ಕಾಣದ-
ನಗೆ-ಕಾಯಕದ ಒಂಟಿ.
(ಹುಟ್ಟಿ-ಬೆಳೆದ ಮನೆಗಾಗಿ ಸ್ವಂತ ಸಂಸಾರವನ್ನೂ ಕಡೆಗಣಿಸಿ, ತನ್ನದೆಲ್ಲವನ್ನೂ ಧಾರೆಯೆರೆದು, ಬಾಳು ಸಾಗಿಸುವ ‘ಪರಕೀಯ ಆತ್ಮ’ರಿಗಾಗಿ....)
(೨೫-ಫ಼ೆಬ್ರವರಿ-೨೦೦೪)
Labels:
'ಭಾವಬಿಂಬ'ದಿಂದ,
ಕಥನಕಾರಣ,
ಹೀಗೇ ಸಾಗಲಿ
Subscribe to:
Posts (Atom)