ಇನ್ನೊಂದು ಅಕ್ಷರಂಗಳ

"ಸುಪ್ತದೀಪ್ತಿ"ಯ ಕಿಟಕಿ->->->

Sunday 8 February, 2009

ಯಾತ್ರೆ


ನೆಲವ ಕೊರೆದು, ಮರವ ಕಡಿದು,
ಸೋಗೆ, ಬಿದಿರು ಒಟ್ಟಣೆ,
ಪರಮಯಾತ್ರೆಗಟ್ಟಣೆ.

ಮಂತ್ರ-ತಂತ್ರ, ಎಣ್ಣೆ-ನೀರು,
ಹೂವು, ಹಳದಿ, ಕುಂಕುಮ,
ದರ್ಭೆ, ಎಳ್ಳು ತತ್ಸಮ.

ಬರಿಯಕ್ಷತೆ, ಬುರುಡೆದೀಪ,
ಬಿರಿದ ಎದೆಯ ಕಂಗಳು,
ತಡವರಿಸುವ ಕೈಗಳು.

ಕಾಲವ್ಯಾಲ ದಿಗ್ವಿಜಯದಿ-
ತರ್ಕ, ಜ್ಞಾನ ನಗಣಿತ,
ಬಾಳಬಿಂಬ ಪರಿಮಿತ.

ಅಚ್ಚಳಿಯದು, ಮುಚ್ಚುಳಿಯದು,
ಬಂಧು ನಿನ್ನ ಬಂಧನ,
ಪಂಚ ಭೂತ ಚೇತನ.

(೧೩-ಜುಲೈ-೨೦೦೬)