ಇನ್ನೊಂದು ಅಕ್ಷರಂಗಳ

"ಸುಪ್ತದೀಪ್ತಿ"ಯ ಕಿಟಕಿ->->->

Thursday 1 October, 2009

ವಾಯುವಿಹಾರ

ಬರಹೇಳಿದ್ದ ದುಷ್ಯಂತ.
ಮರದ ಕೆಳಗೆ ಕಾದಳು,
ಕಾದೇ ಕಾದಳು ಇವಳು.
ಬೆರಳಲ್ಲಿ ಉಂಗುರ,
ಬಾನಲ್ಲಿ ಚಂದಿರ.

ರಥವಿಲ್ಲದ ಕುದುರೆಯಲ್ಲಿ
ಟಕಟಕಿಸುತ್ತ ಬಂದ ನಲ್ಲ
ಹತ್ತು- ಎಂದ.
ಹಿಂದೆ-ಮುಂದೆ ನೋಡದೆ,
ಕಣ್ವ-ಗೌತಮಿಯರ ನೆನೆಯದೆ,
ಬೆನ್ನಿಗಂಟಿದಳು,
ಕಣ್ಣು ಮುಚ್ಚಿದಳು.

ಗಾಳಿಯ ಸುಗಂಧ ಇವನದೇ.
ಕುದುರೆಯ ವೇಗ ಮನಸಿನದೇ.

ಎಚ್ಚರಾದಾಗ-
ಉಂಗುರ ಮೀನಿನೊಳಗಿತ್ತು.
ಮುದಿಕುದುರೆ ಕುಂಟುತ್ತಿತ್ತು.
ಮರದ ಒಂಟಿ ನೆರಳು
ಕಾದು ಕಾದು... ಕರಟಿತ್ತು.
ಭರತ ನಗುತ್ತಿದ್ದ.
(೧೬-ಸೆಪ್ಟೆಂಬರ್-೨೦೦೬)