ಬರಹೇಳಿದ್ದ ದುಷ್ಯಂತ.
ಮರದ ಕೆಳಗೆ ಕಾದಳು,
ಕಾದೇ ಕಾದಳು ಇವಳು.
ಬೆರಳಲ್ಲಿ ಉಂಗುರ,
ಬಾನಲ್ಲಿ ಚಂದಿರ.
ರಥವಿಲ್ಲದ ಕುದುರೆಯಲ್ಲಿ
ಟಕಟಕಿಸುತ್ತ ಬಂದ ನಲ್ಲ
ಹತ್ತು- ಎಂದ.
ಹಿಂದೆ-ಮುಂದೆ ನೋಡದೆ,
ಕಣ್ವ-ಗೌತಮಿಯರ ನೆನೆಯದೆ,
ಬೆನ್ನಿಗಂಟಿದಳು,
ಕಣ್ಣು ಮುಚ್ಚಿದಳು.
ಗಾಳಿಯ ಸುಗಂಧ ಇವನದೇ.
ಕುದುರೆಯ ವೇಗ ಮನಸಿನದೇ.
ಎಚ್ಚರಾದಾಗ-
ಉಂಗುರ ಮೀನಿನೊಳಗಿತ್ತು.
ಮುದಿಕುದುರೆ ಕುಂಟುತ್ತಿತ್ತು.
ಮರದ ಒಂಟಿ ನೆರಳು
ಕಾದು ಕಾದು... ಕರಟಿತ್ತು.
ಭರತ ನಗುತ್ತಿದ್ದ.
(೧೬-ಸೆಪ್ಟೆಂಬರ್-೨೦೦೬)
ಇನ್ನೊಂದು ಅಕ್ಷರಂಗಳ
"ಸುಪ್ತದೀಪ್ತಿ"ಯ ಕಿಟಕಿ->->->
Thursday, 1 October 2009
Subscribe to:
Posts (Atom)