ಹೇಳಬೇಕೆಂದುಕೊಂಡದ್ದು ಒಂದು
ಬಿಸಿಯುಸಿರಿನ ಒತ್ತಡಕ್ಕೆ ಪಕ್ಕಾಗಿ
ಮುತ್ತು ಮುತ್ತಾಗಿ ಚಿಮ್ಮಿ ಉದುರಿ
ತೋಟದೆಡೆಯಲ್ಲಿ ಬಿತ್ತಿದ್ದು ಮೊಳಕೆಯೊಡೆದು
ಅಕ್ಷರಕ್ಷರ ಪದಪದ ಸಾಲುಗಳೆಲ್ಲ
ಒಂದಕ್ಕೊಂದು ಬೆಸೆದು ಗೋಜಲು ಗೋಜಲು
ಬಿಸಿಲಿಗೆ ಹಚ್ಚನೆ ಹರಡಿ ಬೆಳೆದು
ಹಿತ್ತಿಲ ತುಂಬೆಲ್ಲ ಕಣ್ಣಿಗೆ ತಂಪು
ಕಾಲ್ತೊಡಕುವ ಕುಂಬಳ ಬಳ್ಳಿ
ದಟ್ಟ ಬಣ್ಣ ನಳನಳಿಸುವ ದೊರಗು
ಎಲೆಗಳ ನಡುವೆ ಹೂವಾಗಿದ್ದೂ ಕಾಣದೆ
ಕಿರುಕಾಯಾಗಿ ಎಳಸು ಮಾಗಿ
ಪಕ್ವವಾದಾಗ ಹಸುರಿನ ಮರೆಯಲ್ಲಿ
ಬೂದುಬಿಳುಪೋ ಚೆಂದಗೆಂಪೋ, ಅಂತೂ
ಬಳ್ಳಿಗೆ ನಿಸ್ವಾರ್ಥ ಸಫಲ ಧರ್ಮ
ಮಾಲಿಗೆ ಅಧಿಕಾರವಿಲ್ಲದ ಕರ್ಮ
(೨೪-ಜೂನ್-೨೦೦೯)
(09-08-09ರಂದು ಕನ್ನಡ ಪ್ರಭ ಸಾಪ್ತಾಹಿಕದಲ್ಲಿ ಪ್ರಕಟಿತ. ಸಂಪಾದಕರಿಗೆ ವಂದನೆಗಳೊಂದಿಗೆ ಧನ್ಯವಾದಗಳು. ಡಾ. ವಸಂತಕುಮಾರ್ ಪೆರ್ಲ ಅವರು ಸಂಪಾದಿಸುತ್ತಿರುವ "ಕಾವ್ಯ ೨೦೦೯"ರಲ್ಲಿಯೂ ಸೇರ್ಪಡೆಯಾಗುತ್ತಿದೆ; ಅವರಿಗೂ ಸಸ್ನೇಹ ನಮನಗಳು.)
ಇನ್ನೊಂದು ಅಕ್ಷರಂಗಳ
"ಸುಪ್ತದೀಪ್ತಿ"ಯ ಕಿಟಕಿ->->->
Tuesday 16 March, 2010
Subscribe to:
Posts (Atom)