ಇನ್ನೊಂದು ಅಕ್ಷರಂಗಳ

"ಸುಪ್ತದೀಪ್ತಿ"ಯ ಕಿಟಕಿ->->->

Thursday 15 July, 2010

ಪುನರ್ಜೀವ

ಎಲ್ಲಿ ಏನು ಹೇಳಬೇಕೆ ಕೃಷ್ಣ ರಾಧೆಗೆ
ಬರಿಗಾಲಿನಲ್ಲೆ ಓಡಿ ಬಂದೆ ಯಮುನೆ ತೀರಕೆ

ಸಲುಗೆ ಸ್ನೇಹ ಬೆಳೆದ ಪ್ರೀತಿ
ಬೆಸೆದ ಮನದ ರೀತಿಯು
ನಿನ್ನ ನನ್ನ ಭೇದ ಮರೆತು
ಒಂದೆ ಭಾವ ನೀತಿಯು
ಜೀವ ಮುರಳಿಯೂದಲು ಜಗವೇ ನಲಿವುದು
ನಾನೇ ಗೋಪಿಕೆ... ನೀನೆ ನನ್ನ ಗಿರಿಧರ...

ಬೇರೆ ಮಣ್ಣಿನಲ್ಲಿ ನಮ್ಮ
ಬೇರು ನೆಲೆಸಬೇಕಿದೆ
ದಾರಿ ಯಾವುದೆಂದು ಹುಡುಕಿ
ಮನೆಯ ಸೇರಬೇಕಿದೆ
ಒಲವ ತಂತಿ ಮೀಟಲು ನೆಲವೇ ಮಿಡಿವುದು
ನೀನೇ ವನಮಾಲಿ... ನಾನೇ ನಿನ್ನ ಪ್ರೇಮಿಕೆ...
(೧೦-ಜುಲೈ-೧೯೯೮)