ಏನೋ ಹುಡುಕುತ ಹೊರಟೆ
ಅವಳು ಎದುರಲಿ ಬಂದು
ತುಂಬು ಕಂಗಳ ತುಂಬ ನಿನದೆ ಬಿಂಬ
ಜಡೆಯೆಳೆದು ಕೈಹಿಡಿದು
ಆಟವಾಡಿದ ನೀನೆ
ಈಗ ಮರೆಯಾಗಿರುವೆ ಏನು ಜಂಭ?
ಸುತ್ತ ಮುತ್ತುವ ಹುಡುಗ
ಬೆನ್ಹಿಂದೆ ಬರುತಿಹನು
ನನ್ನೊಳಗೆ ಅವನಿಗೆ ಸ್ಥಾನವಿಲ್ಲ
ನಿನ್ನ ಧ್ಯಾನವ ಮನದಿ
ತುಂಬಿ ಕಳೆದಂತಿರುವೆ
ನಿನಗೇಕೊ ನನ್ನೆಡೆಗೆ ಗಮನವಿಲ್ಲ
ಅರಸಿ ಬಂದವಳನ್ನು
‘ಅರಸಿ’ ಎನ್ನದೆ ನೀನು
ಅರಗಿಣಿಯ ಅರಸುತ್ತ ಅಲೆಯುತಿರುವೆ
ನಿನ್ನ ಮೋಹನ ಮುರಳಿ
ನನ್ನುಸಿರ ನುಡಿಸಿರಲು
ಸಖ, ನಿನ್ನ ಛಾಯೆಯಲಿ ಬಾಳುತಿರುವೆ.
(೨೬-ಆಗಸ್ಟ್-೨೦೧೩)
ಇನ್ನೊಂದು ಅಕ್ಷರಂಗಳ
"ಸುಪ್ತದೀಪ್ತಿ"ಯ ಕಿಟಕಿ->->->
Thursday 29 August, 2013
Wednesday 28 August, 2013
ಬೆಣ್ಣೆ ಕಳ್ಳ
ನೆಲುವಿನಲ್ಲಿ ಹಾಲು ಮೊಸರು
ನೆಲದ ಮೇಲೆ ಗೊಲ್ಲ
ಮೆಲ್ಲಬೇಕು ಅಚ್ಚ ಬೆಣ್ಣೆ
ಕೈಗೆ ನಿಲುಕದಲ್ಲ
ಹಾರಿ ಕುಣಿದು ಕಪ್ಪೆ ಜಿಗಿದು
ತೂರಿ ನೋಟದೇಣಿ
ಭಾರಿ ಕಷ್ಟ ಪಟ್ಟರೇನು
ಕೈಗೆ ಸಿಗದು ಭರಣಿ
ಸುತ್ತ ಮುತ್ತ ಕಳ್ಳ ಚಿತ್ತ
ಇತ್ತ ಬಂದರಾರು?
ಮೆತ್ತಗೊಮ್ಮೆ ಇಣುಕಿ ನೋಡೆ
ಕೈಗೆ ಹೆಗಲ ಊರು
ಅಣ್ಣ ಬಂದ ಜೊತೆಗೆ ತಂದ
ತನ್ನ ಭಂಡ ಜೋಡಿ
ಬಣ್ಣವೇರಿ ಬಾನಿನತ್ತ
ಕೈಗೆ ಬಂತು ಜಾಡಿ
ಕಿಲಕಿಲಕಿಲ ಬಳೆಯ ಸದ್ದು
ಚಲನೆ ಪಡೆದ ಕೂಟ
ನೆಲದ ಮೇಲೆ ಹಾಲು ಮೊಸರು
ಕೈಗೆ ಬೆಣ್ಣೆಯೂಟ
(೦೨-ಆಗಸ್ಟ್-೨೦೧೩)
Labels:
Poems,
ಆತ್ಮ ಚಿಂತನ...,
ಕಥನಕಾರಣ,
ಚಿಂತನ-ಮಂಥನ,
ಹೀಗೇ ಸಾಗಲಿ,
ಹೊಚ್ಚ ಹೊಸದು
Wednesday 21 August, 2013
ಶ್ರಾವಣ - ವರ್ಷನೂತನ
ಶ್ರಾವಣದ ಧಾರೆಯಲಿ ಮಾಧವಗೆ ಬರಿ ತಾಪ
ರಾಧೆಗಾದರೊ ಸೋನೆ ಸುರಿವಬೇಗೆ
ಹಾಡಿ ಹರಿಯುವ ನದಿಗೆ ಕೆನ್ನೀರು ಉಕ್ಕುಕ್ಕಿ
ಕಡಲ ಸೇರುವ ತವಕ ದೌಡು ನಡಿಗೆ
ಭೋರ್ಗರೆವ ಮೊರೆತದಲಿ ಹುದುಗಿ ಮುರಳಿಯ ಗಾನ
ಒಲವ ಹಸುಕರುಗಳಿಗೆ ಮರೆತ ಮೇವು
ಮುಮ್ಮೇಳದಲ್ಲಿರಲು ಹನಿಹನಿಗಳದೆ ಮಂದ್ರ
ಬಿದುರುಗೊಳವೆಯು ದೇಹ ಉಸಿರೆ ಕಾವು
ಆಕಾಶರಾಯನಿಗೆ ಹಗುರವಾಗುವ ಭಾವ
ನಾವುನೀವೆಲ್ಲರಿಗೆ ಬೆಳೆವ ಸಮಯ
ನೆಲಸೇರಿ ಸಾಗರಕೆ ಹರಿವ ಒಮ್ಮನದೋಟ
ಗೋಪಾಲ ಪಾದಗಳ ತೊಳೆವಾಲಯ
ಹೃದಯದುರಿಯನು ತಣಿಸಿ ಮಣಿಸುವನು ಶ್ರಾವಣ
ಮತ್ತ ವಿಭ್ರಾಂತರನು ದಣಿಸುವನು ಶ್ರಾವಣ
(೧೩-ಆಗಸ್ಟ್-೨೦೧೩)
ರಾಧೆಗಾದರೊ ಸೋನೆ ಸುರಿವಬೇಗೆ
ಹಾಡಿ ಹರಿಯುವ ನದಿಗೆ ಕೆನ್ನೀರು ಉಕ್ಕುಕ್ಕಿ
ಕಡಲ ಸೇರುವ ತವಕ ದೌಡು ನಡಿಗೆ
ಭೋರ್ಗರೆವ ಮೊರೆತದಲಿ ಹುದುಗಿ ಮುರಳಿಯ ಗಾನ
ಒಲವ ಹಸುಕರುಗಳಿಗೆ ಮರೆತ ಮೇವು
ಮುಮ್ಮೇಳದಲ್ಲಿರಲು ಹನಿಹನಿಗಳದೆ ಮಂದ್ರ
ಬಿದುರುಗೊಳವೆಯು ದೇಹ ಉಸಿರೆ ಕಾವು
ಆಕಾಶರಾಯನಿಗೆ ಹಗುರವಾಗುವ ಭಾವ
ನಾವುನೀವೆಲ್ಲರಿಗೆ ಬೆಳೆವ ಸಮಯ
ನೆಲಸೇರಿ ಸಾಗರಕೆ ಹರಿವ ಒಮ್ಮನದೋಟ
ಗೋಪಾಲ ಪಾದಗಳ ತೊಳೆವಾಲಯ
ಹೃದಯದುರಿಯನು ತಣಿಸಿ ಮಣಿಸುವನು ಶ್ರಾವಣ
ಮತ್ತ ವಿಭ್ರಾಂತರನು ದಣಿಸುವನು ಶ್ರಾವಣ
(೧೩-ಆಗಸ್ಟ್-೨೦೧೩)
Wednesday 14 August, 2013
ಜಗದ ಪರಿ
ಮುದುಡದಿರು ಮನವೆ!
ಮುದುಡಿದರೆ ಕಸವೆಂದು ಎಸೆಯುವುದು ನಿನ್ನ
ಬಾಡದಿರು ಮೊಗವೆ!
ಬಾಡಿದರೆ ಬೇಡೆಂದು ಬಿಸುಟುವುದು ನಿನ್ನ
ಕೊರಗದಿರು ಎದೆಯೆ!
ಕೊರಗಿದರೆ ಕೇಡೆಂದು ಕೆರೆಯುವುದು ನಿನ್ನ
ಮರುಗದಿರು ಮಡಿಲೆ!
ಮರುಗಿದರೆ ಹೋಗೆಂದು ಕಳಿಸುವುದು ನಿನ್ನ
ಅಳಲದಿರು ಅರಿವೆ!
ಅಳಲಿದರೆ ಅಳಿಯೆಂದು ಹೊಸಕುವುದು ನಿನ್ನ
ನೋಯದಿರು ಒಲವೆ!
ನೋಯುತಿರೆ ಬೇಯೆಂದು ಉರಿಸುವುದು ನಿನ್ನ
ಅಂಜದಿರು ಛಲವೆ!
ಅಂಜಿದರೆ ನಲುಗೆಂದು ಅಲುಗಿಪುದು ನಿನ್ನ
ಬೆಚ್ಚದಿರು ಬಲವೆ!
ಬೆಚ್ಚಿದರೆ ಬೀಳೆಂದು ಬೆದರಿಪುದು ನಿನ್ನ
ಬೀಳದಿರು ಮತಿಯೆ!
ಬೀಳುತಿರೆ ಕೊಳೆಯೆಂದು ಕೊಚ್ಚುವುದು ನಿನ್ನ
ಸೋಲದಿರು ಧೃತಿಯೆ!
ಸೋಲುತಿರೆ ಸಾಯೆಂದು ಸೋಸುವುದು ನಿನ್ನ
ಪ್ರೀತಿಸುವ ಜೀವ,
ಮುನ್ನೋಟದೀವಟಿಗೆ ಹಿಡಿದು ನಡೆಸೆನ್ನ
ಉಚ್ಚರದ ಭಾವ,
ಮೆಚ್ಚಾಗುವಂದದಲಿ ಎಚ್ಚರಿಸು ಎನ್ನ
(೧-ಆಗಸ್ಟ್-೨೦೧೩)
Labels:
Poems,
ಆತ್ಮ ಚಿಂತನ...,
ಚಿಂತನ-ಮಂಥನ,
ಹೊಚ್ಚ ಹೊಸದು
Subscribe to:
Posts (Atom)