ಶ್ರಾವಣದ ಧಾರೆಯಲಿ ಮಾಧವಗೆ ಬರಿ ತಾಪ
ರಾಧೆಗಾದರೊ ಸೋನೆ ಸುರಿವಬೇಗೆ
ಹಾಡಿ ಹರಿಯುವ ನದಿಗೆ ಕೆನ್ನೀರು ಉಕ್ಕುಕ್ಕಿ
ಕಡಲ ಸೇರುವ ತವಕ ದೌಡು ನಡಿಗೆ
ಭೋರ್ಗರೆವ ಮೊರೆತದಲಿ ಹುದುಗಿ ಮುರಳಿಯ ಗಾನ
ಒಲವ ಹಸುಕರುಗಳಿಗೆ ಮರೆತ ಮೇವು
ಮುಮ್ಮೇಳದಲ್ಲಿರಲು ಹನಿಹನಿಗಳದೆ ಮಂದ್ರ
ಬಿದುರುಗೊಳವೆಯು ದೇಹ ಉಸಿರೆ ಕಾವು
ಆಕಾಶರಾಯನಿಗೆ ಹಗುರವಾಗುವ ಭಾವ
ನಾವುನೀವೆಲ್ಲರಿಗೆ ಬೆಳೆವ ಸಮಯ
ನೆಲಸೇರಿ ಸಾಗರಕೆ ಹರಿವ ಒಮ್ಮನದೋಟ
ಗೋಪಾಲ ಪಾದಗಳ ತೊಳೆವಾಲಯ
ಹೃದಯದುರಿಯನು ತಣಿಸಿ ಮಣಿಸುವನು ಶ್ರಾವಣ
ಮತ್ತ ವಿಭ್ರಾಂತರನು ದಣಿಸುವನು ಶ್ರಾವಣ
(೧೩-ಆಗಸ್ಟ್-೨೦೧೩)
ಇನ್ನೊಂದು ಅಕ್ಷರಂಗಳ
"ಸುಪ್ತದೀಪ್ತಿ"ಯ ಕಿಟಕಿ->->->
Wednesday 21 August, 2013
Subscribe to:
Post Comments (Atom)
2 comments:
ಶ್ರಾವಣದ ಧಾರೆಯಲಿ ಮಾಧವಗೆ ಬರಿ ತಾಪ
ರಾಧೆಗಾದರೊ ಸೋನೆ ಸುರಿವಬೇಗೆ .. ಇಬ್ಬರಿಗೂ ಶಾಂತತೆಯನ್ನು ಕೊಡು ದೇವರೇ..
ಚೆನ್ನಾಗಿದೆ ಅಕ್ಕ.
ಯಾಕಪ್ಪಾ, ಅವರಿಬ್ಬರ ತಾಪ+ಬೇಗೆ ನಿನಗೂ ಸವರಿಕೊಂಡಿದಾ? ಅವರು ಶಾಂತವಾದರೆ ಲೋಕವೇ ಸಪ್ಪಗಾದೀತು, ನೆನಪಿರಲಿ.
Post a Comment