ಅರುಣ ರವಿ ರಾಗಕ್ಕೆ ಹೊಳೆದು ನರ್ತಿಸುತಿದ್ದ
ಹುಲ್ಲಂಚ ಮಿಂಚನ್ನು ತೊರೆದೆವೇಕೆ?
ಪುಟಿ-ಪುಟಿದು ಏಳುತ್ತ ಆಗಸಕೆ ಹಾರುತ್ತ
ಅರಳಿ ಬೆಳೆಯುವ ಚಿಗುರ ಮರೆತೆವೇಕೆ?
ಹಾಲುಗಲ್ಲದ ಮೇಲೆ ಇಟ್ಟ ಬೆಟ್ಟನು ಸರಿಸಿ
ದಿಟ್ಟಿ ಸೋಕದ ಬೊಟ್ಟನಿಟ್ಟೆವೇಕೆ?
ಕೌತುಕವ ಸೋಜಿಗವ ಕಣ್ಣಂಚಿನಲೆ ಸವರಿ
ತುರಗ ಪಟ್ಟಿಯನಡ್ಡ ಕೊಟ್ಟೆವೇಕೆ?
ಬಿಂಬವಿಲ್ಲದ ಗುಡಿಗೆ ಮೂರ್ತತೆಯ ಸ್ವಾಗತಿಸಿ
ಅಷ್ಟಬಂಧಗಳಿಂದ ಬಿಗಿದೆವೇಕೆ?
ಸ್ತಂಭಗಳ ಅರಮನೆಯ ತುಂಬ ತುಂಬಿದೆ ಸರಕು
ಬಹಿರಂತರಂಗದಲಿ ಕೋಟೆಯೇಕೆ?
ಅನುದಿನವು ಸುಪ್ರಭೆಯ ಹೀರುವೆಲೆ ಹಸುರಂತೆ
ಕೂಸು-ಮನವಿರಲೆಮಗೆ ಮುಪ್ಪದೇಕೆ?
(೨೪-ಆಗಸ್ಟ್-೨೦೦೪)
ಇನ್ನೊಂದು ಅಕ್ಷರಂಗಳ
"ಸುಪ್ತದೀಪ್ತಿ"ಯ ಕಿಟಕಿ->->->
Friday 18 September, 2009
Subscribe to:
Posts (Atom)