ಇನ್ನೊಂದು ಅಕ್ಷರಂಗಳ
"ಸುಪ್ತದೀಪ್ತಿ"ಯ ಕಿಟಕಿ->->->
Sunday, 8 February 2009
ಯಾತ್ರೆ
ನೆಲವ ಕೊರೆದು, ಮರವ ಕಡಿದು,
ಸೋಗೆ, ಬಿದಿರು ಒಟ್ಟಣೆ,
ಪರಮಯಾತ್ರೆಗಟ್ಟಣೆ.
ಮಂತ್ರ-ತಂತ್ರ, ಎಣ್ಣೆ-ನೀರು,
ಹೂವು, ಹಳದಿ, ಕುಂಕುಮ,
ದರ್ಭೆ, ಎಳ್ಳು ತತ್ಸಮ.
ಬರಿಯಕ್ಷತೆ, ಬುರುಡೆದೀಪ,
ಬಿರಿದ ಎದೆಯ ಕಂಗಳು,
ತಡವರಿಸುವ ಕೈಗಳು.
ಕಾಲವ್ಯಾಲ ದಿಗ್ವಿಜಯದಿ-
ತರ್ಕ, ಜ್ಞಾನ ನಗಣಿತ,
ಬಾಳಬಿಂಬ ಪರಿಮಿತ.
ಅಚ್ಚಳಿಯದು, ಮುಚ್ಚುಳಿಯದು,
ಬಂಧು ನಿನ್ನ ಬಂಧನ,
ಪಂಚ ಭೂತ ಚೇತನ.
(೧೩-ಜುಲೈ-೨೦೦೬)
Labels:
'ಭಾವಬಿಂಬ'ದಿಂದ,
ಆತ್ಮ ಚಿಂತನ...,
ಹೀಗೇ ಸಾಗಲಿ
Tuesday, 3 February 2009
ಮಾಯೆ
ಜಗದಚ್ಚರಿಯ ಪರಿಗೆ ಬೆರಗಾಗುವಂದದಿಯೆ
ಅಗಲಿಕೆಗೆ ಮರುಗುವಂತೆ,
ಹಗೆ ಮೋಹ ಭವದಾಹದಂಟುನಂಟನ್ನಿತ್ತೆ
ಹೊಗುವಂತೆ ಹಾತೆ ಉರಿಯ;
ಧಗೆಯೊಳಗೆ ಮನವಿಹುದು, ಸುತ್ತ ಮುತ್ತಿದೆ ಹೊಗೆಯು,
ಮುಗಿಸಲಾರೆನು ಪಯಣವ;
ಅಗಣಿತದ ಗಣಿತದಲಿ ನನ್ನ ಲೆಕ್ಕವದೇನು
ನಗುವಿನಿಂದಳೆಯೊ ಬದುಕ.
ಅರಿವಿನಳವಿಗೆ ಸಿಗದ ಮರೆಯ ಶಕ್ತಿಯೆ, ಕೊಂಚ
ಅರಿವಳಿಕೆಯನ್ನು ಸರಿಸು;
ಬರಿದುಗಣ್ಣಿಗೆ ಬರುವ ಮಣ್ಣ ಬಣ್ಣಗಳನ್ನು
ಕುರುಡು ಬುದ್ಧಿಯಿಂದಳಿಸು;
ಹರಿಸು ನೀ ಸ್ನೇಹಜಲ, ಪ್ರೇಮಗಂಗಾಸಲಿಲ
ಹರಸು, ಹರಿ ಮಾಯೆಯನ್ನು.
(೧೫-ಜನವರಿ-೨೦೦೭)
Labels:
'ಭಾವಬಿಂಬ'ದಿಂದ,
ಆತ್ಮ ಚಿಂತನ...,
ಹೀಗೇ ಸಾಗಲಿ
Subscribe to:
Posts (Atom)