ಕಾಯೇ ನಮ್ಮನು ಸರಸ್ವತಿ
ಕತ್ತಲ ಹರಿಸಿ ಕೊಡು ನೀ ಸನ್ಮತಿ ||ಪ||
ಹಂಸ ವಾಹಿನಿ, ಸರಸಿಜ ಮೋಹಿನಿ
ಮನಸಿಜನಗ್ರಜನರಸೀ |
ಅಕ್ಷರ ಜನನಿ, ಜ್ಞಾನಪ್ರದಾಯಿನಿ
ಮಂದಹಾಸಿ ಮೃದುಭಾಷೀ ||ಚರಣ-೧||
ಶ್ವೇತವಸನೇ ಶುಕ್ಲಾಭರಣೇ
ಚಂದ್ರ ಕಾಂತಿ ಪ್ರಭಾಸೇ |
ವೀಣಾ ಸ್ಫಟಿಕಮಣಿ ಪುಸ್ತಕ ಪಾಣೀ
ಕಾವ್ಯಗಾಯನ ಪ್ರೀತೇ ||ಚರಣ-೨||
ಹರಸೇ ತಾಯೇ, ಅಂಬುಜಾಸನೇ
ಅಂಬುಜದಳ ನೇತ್ರೇ |
ಸಲಹೇ ತಾಯೇ, ಮಂಗಳದಾಯಿನೀ
ಅಜಪ್ರಿಯೇ ಶುಭ ಗಾತ್ರೇ ||ಚರಣ-೩||
(೫-ಸೆಪ್ಟೆಂಬರ್-೨೦೦೫ - ೪-ಜೂನ್-೨೦೦೮)
ಇನ್ನೊಂದು ಅಕ್ಷರಂಗಳ
"ಸುಪ್ತದೀಪ್ತಿ"ಯ ಕಿಟಕಿ->->->
Saturday, 26 September 2009
Friday, 18 September 2009
ಕೂಸು ಮನ
ಅರುಣ ರವಿ ರಾಗಕ್ಕೆ ಹೊಳೆದು ನರ್ತಿಸುತಿದ್ದ
ಹುಲ್ಲಂಚ ಮಿಂಚನ್ನು ತೊರೆದೆವೇಕೆ?
ಪುಟಿ-ಪುಟಿದು ಏಳುತ್ತ ಆಗಸಕೆ ಹಾರುತ್ತ
ಅರಳಿ ಬೆಳೆಯುವ ಚಿಗುರ ಮರೆತೆವೇಕೆ?
ಹಾಲುಗಲ್ಲದ ಮೇಲೆ ಇಟ್ಟ ಬೆಟ್ಟನು ಸರಿಸಿ
ದಿಟ್ಟಿ ಸೋಕದ ಬೊಟ್ಟನಿಟ್ಟೆವೇಕೆ?
ಕೌತುಕವ ಸೋಜಿಗವ ಕಣ್ಣಂಚಿನಲೆ ಸವರಿ
ತುರಗ ಪಟ್ಟಿಯನಡ್ಡ ಕೊಟ್ಟೆವೇಕೆ?
ಬಿಂಬವಿಲ್ಲದ ಗುಡಿಗೆ ಮೂರ್ತತೆಯ ಸ್ವಾಗತಿಸಿ
ಅಷ್ಟಬಂಧಗಳಿಂದ ಬಿಗಿದೆವೇಕೆ?
ಸ್ತಂಭಗಳ ಅರಮನೆಯ ತುಂಬ ತುಂಬಿದೆ ಸರಕು
ಬಹಿರಂತರಂಗದಲಿ ಕೋಟೆಯೇಕೆ?
ಅನುದಿನವು ಸುಪ್ರಭೆಯ ಹೀರುವೆಲೆ ಹಸುರಂತೆ
ಕೂಸು-ಮನವಿರಲೆಮಗೆ ಮುಪ್ಪದೇಕೆ?
(೨೪-ಆಗಸ್ಟ್-೨೦೦೪)
ಹುಲ್ಲಂಚ ಮಿಂಚನ್ನು ತೊರೆದೆವೇಕೆ?
ಪುಟಿ-ಪುಟಿದು ಏಳುತ್ತ ಆಗಸಕೆ ಹಾರುತ್ತ
ಅರಳಿ ಬೆಳೆಯುವ ಚಿಗುರ ಮರೆತೆವೇಕೆ?
ಹಾಲುಗಲ್ಲದ ಮೇಲೆ ಇಟ್ಟ ಬೆಟ್ಟನು ಸರಿಸಿ
ದಿಟ್ಟಿ ಸೋಕದ ಬೊಟ್ಟನಿಟ್ಟೆವೇಕೆ?
ಕೌತುಕವ ಸೋಜಿಗವ ಕಣ್ಣಂಚಿನಲೆ ಸವರಿ
ತುರಗ ಪಟ್ಟಿಯನಡ್ಡ ಕೊಟ್ಟೆವೇಕೆ?
ಬಿಂಬವಿಲ್ಲದ ಗುಡಿಗೆ ಮೂರ್ತತೆಯ ಸ್ವಾಗತಿಸಿ
ಅಷ್ಟಬಂಧಗಳಿಂದ ಬಿಗಿದೆವೇಕೆ?
ಸ್ತಂಭಗಳ ಅರಮನೆಯ ತುಂಬ ತುಂಬಿದೆ ಸರಕು
ಬಹಿರಂತರಂಗದಲಿ ಕೋಟೆಯೇಕೆ?
ಅನುದಿನವು ಸುಪ್ರಭೆಯ ಹೀರುವೆಲೆ ಹಸುರಂತೆ
ಕೂಸು-ಮನವಿರಲೆಮಗೆ ಮುಪ್ಪದೇಕೆ?
(೨೪-ಆಗಸ್ಟ್-೨೦೦೪)
Labels:
'ಭಾವಬಿಂಬ'ದಿಂದ,
ಆತ್ಮ ಚಿಂತನ...,
ರಿಗ್ರೆಷನ್,
ಹೀಗೇ ಸಾಗಲಿ
Subscribe to:
Posts (Atom)