ಮಧ್ಯಾಹ್ನದ ಊಟ ಮುಗಿಸಿ ಹರಿಣಿ ನಿದ್ದೆಗೆ ಜಾರಿದಳು. ತಂಗಿ ಶಂಕರಿಯ ಮನೆಯಲ್ಲಿ ಅಮ್ಮನನ್ನು ಬಿಟ್ಟು ಬಂದಿದ್ದ ಸುಮುಖ್ ಹರಿಣಿಯನ್ನು ಇಲ್ಲಿ ನೋಡಿ ಹುಬ್ಬೇರಿಸಿದ್ದರು, ಅಷ್ಟೇ. ಕುರ್ಚಿಯಲ್ಲೇ ನಡುಹಗಲಿನ ಸಿಹಿನಿದ್ದೆಗೆ ಜಾರಬೇಕೂಂತ ಅಂದಾಜು ಮಾಡ್ತಾ ಪೇಪರ್ ಹಿಡಿದವರನ್ನು ರೂಮಿಗೆ ಕರೆದೆ. ಮತ್ತೊಮ್ಮೆ ಹುಬ್ಬು ಹಾರಿಸುತ್ತಾ ಕಳ್ಳ ನಗುವಿನ ಒಟ್ಟಿಗೆ ಸಣ್ಣಗೆ ಸಿಳ್ಳೆ ಹಾಕುತ್ತಾ ಒಳಗೆ ಬಂದವರ ಬೆನ್ನಿಗೊಂದು ಗುದ್ದಿ ಹೇಳಿದೆ, ‘ಸರಸಕ್ಕೆ ಕರ್ದದ್ದೇ ಅಲ್ಲ ನಾನು. ವಿಷಯ ಗಂಭೀರವಾಗಿದೆ. ಸ್ವಲ್ಪ ಗಮನ ಇಟ್ಟು ಕೇಳಿ, ಆಯ್ತಾ?’
ನನ್ನ ಸೀರಿಯಸ್ ಸ್ವರ ಅವರ ರೋಮಿಯೋನನ್ನು ಓಡಿಸಿತ್ತು. ಮಕ್ಕಳೇ, ನಿಮ್ಮ ಮುಂದೆ ಇದೆಲ್ಲ ಹೇಳ್ಲಿಕ್ಕೆ ನಂಗೇನೂ ತೊಂದ್ರೆ ಇಲ್ಲ. ಯಾಕಂದ್ರೆ, ನಾಳೆ ನಾಳೆ ಅನ್ನುವಾಗ ನೀವೂ ಇದೇ ದಾರಿಯಲ್ಲಿ ಬರುವವರು. ಆದ್ರಿಂದ ನಂಗೇನೂ ನಾಚಿಕೆ ಇಲ್ಲ, ಇದನ್ನೆಲ್ಲ ಬಿಚ್ಚಿಡ್ಲಿಕ್ಕೆ. ಕೇಳಿ. ನನ್ನ ಸೀರಿಯಸ್ ಸ್ವರ ಕೇಳಿ, ಅವರೂ ಗಂಭೀರವಾದರು. ಹರಿಣಿ ಹಿಂದಿನ ರಾತ್ರೆಯೆಲ್ಲ ನಿರೂಪಿಸಿದ ಅವಳ ಐದು ವರ್ಷದ ಜೀವನವನ್ನು ಸುಮುಖ್ ಮುಂದೆ ಬಿಚ್ಚಿಟ್ಟೆ.
“ಚಿನ್ಮಯ್ ಕನ್ಸಲ್ಟೆನ್ಸಿಯ ಮ್ಯಾನೇಜರ್, ಹರಿಣಿಯ ಮಾವನ ಪರಿಚಯಸ್ಥ ಚಿದಾನಂದ. ಇವಳನ್ನು ಪಿ.ಎ. ಆಗಿ ನೇಮಿಸಿಕೊಂಡಿದ್ದ. ಮೊದಮೊದಲು ಎಲ್ಲವೂ ಸುಸೂತ್ರವಾಗಿಯೇ ಇತ್ತು. ಏಳೆಂಟು ತಿಂಗಳು ಕಳೆಯುವಾಗ ಆಫೀಸಿನ ಎಲ್ಲರ ಸ್ನೇಹ ಗಳಿಸಿಕೊಂಡಿದ್ದಳು. ಅಲ್ಲೇ ಇನ್ನೊಬ್ಬ ಮ್ಯಾನೇಜರ್ ವಿನ್ಯಾಸ್. ಇವಳ ಬಗ್ಗೆ ವಿಶೇಷ ಅಕ್ಕರೆ ತೋರಿಸ್ತಿದ್ದ. ಸುಮಾರು ಒಂದು ವರ್ಷದ ವರೆಗೂ ಇವಳಿಗದು ಗಮನಕ್ಕೇ ಬಂದಿರಲಿಲ್ಲ. ಒಂದು ದಿನ ಚಿದಾನಂದ್ ನೇರವಾಗಿ ಹರಿಣಿಯನ್ನು ಕರೆದು ವಿನ್ಯಾಸ್ ಅವಳನ್ನು ಇಷ್ಟ ಪಟ್ಟಿರುವುದಾಗಿ ತಿಳಿಸಿದ. ಬಾಸ್ ಬಾಯಿಂದ ಇಂಥ ಅನಿರೀಕ್ಷಿತ ಸುದ್ದಿ, ಇವಳ ದೃಢ ಮನಸ್ಸನ್ನು ಕದಡಿತು. ಸಮಯಾವಕಾಶ ಕೇಳಿ ರಜೆ ಹಾಕಿ ಊರಿಗೆ ಹೋದಳು. ಅಮ್ಮ, ಅಜ್ಜಿ, ಮಾವ, ಅತ್ತೆ- ಎಲ್ಲರ ಅಭಿಪ್ರಾಯವೂ ಒಂದೇ. ಒಂದು ವಾರ ಊರಲ್ಲಿದ್ದು, ತಲೆ ಕೆಡಿಸಿಕೊಂಡು ಮತ್ತೆ ಬೆಂಗಳೂರಿಗೆ ಬಂದಾಗ ಅಚ್ಚರಿ ಕಾದಿತ್ತು. ಅವಳು ಊರಿಗೆ ಹೋಗುವ ಮೊದಲೇ ವಿನ್ಯಾಸ್ ತನ್ನ ಮುಖಾಂತರ ಊರಿಗೆ ಪತ್ರ ಬರೆಸಿದ ವಿಷಯ ಚಿದಾನಂದ್ ತಿಳಿಸಿದರು. ಅದಕ್ಕೇ ಅವರೆಲ್ಲರೂ ಒಮ್ಮತದಲ್ಲಿದ್ದರು ಎನ್ನುವುದು ಅವಳಿಗೆ ಹೊಳೆಯಿತು. ಅರೆಮನಸ್ಸಿನಿಂದಲೇ ವಿನ್ಯಾಸ್ ಜೊತೆ ಮದುವೆಗೆ ಒಪ್ಪಿಕೊಂಡಳು.
ಒಪ್ಪಿಗೆ ಕೊಟ್ಟದ್ದೇ ಸಾಕೆನ್ನುವ ಹಾಗೆ ವಿನ್ಯಾಸ್ ಆಕೆಯನ್ನು ಓಲೈಸತೊಡಗಿದ. ಅವನ ಮೃದು ಮಾತು, ನಾಜೂಕು ನಡವಳಿಕೆ, ಪ್ರೀತಿ ಪ್ರವಾಹ, ಔಟಿಂಗ್ ಔತಣ, ರೊಮ್ಯಾಂಟಿಕ್ ರೋಮಾಂಚನ... ಎಲ್ಲದರ ಹೊನಲಲ್ಲಿ ತೇಲಿ ಮುಳುಗಿ ಕಳೆದೇ ಹೋದಳು ಸಿಡಿಗುಂಡು ಹರಿಣಿ. ಅವಳ ಕೋಪಾಟೋಪ ಎಲ್ಲವೂ ಶಾಂತಸಾಗರದಲ್ಲಿ ಲೀನ. ತನ್ನ ಹಿರಿಯರನ್ನು ಒಪ್ಪಿಸಿಯೇ ತಾನು ಮದುವೆಯಾಗುವುದು ಅಂತಲೇ ಮದುವೆಯ ಮಾತನ್ನು ಮುಂದೂಡುತ್ತಾ ಬಂದವನ ಕಣ್ಣಲ್ಲಿ ಕಣ್ಣಿಟ್ಟು ತನ್ನ ನೋಟದ ಗುರಿ ತಪ್ಪಿಸಿಕೊಂಡಳು. ಹೀಗೇ ಎರಡು ವರ್ಷಗಳೇ ಕಳೆದವು. ಇಷ್ಟಾದರೂ ಇವಳ ಅಮ್ಮ, ಅಜ್ಜಿ, ಮಾವನಾಗಲೀ ವಿನ್ಯಾಸನ ಮನೆಯವರಾಗಲೀ ಮದುವೆಯ ಬಗ್ಗೆ ಯಾವುದೇ ಮಾತೆತ್ತಲಿಲ್ಲ. ಪ್ರೇಮದಲ್ಲಿ ಈಜುತ್ತಿದ್ದವಳಿಗೆ ತಾನೆಲ್ಲಿದ್ದೇನೆನ್ನುವ ಅರಿವು ಇರಲಿಲ್ಲ. ಎತ್ತ ಸಾಗುತ್ತಿದ್ದೇನೆನ್ನುವುದು ಗಮನಕ್ಕೇ ಬರಲಿಲ್ಲ. ತನ್ನ ರೂಮ್ ಖಾಲಿಮಾಡಿ ಆತನ ಜೊತೆಯಾಗಿ ಬಾಡಿಗೆ ಮನೆಯನ್ನೂ ಮಾಡಿದ್ದಾಯ್ತು.
ಒಂದೇ ಮನೆಯಿಂದ ಒಂದೇ ಆಫೀಸಿಗೆ ಅವನ ಬೈಕಿನಲ್ಲಿ ಹೋಗಿಬರುವ ಯಾವುದೋ ಘಳಿಗೆಯಲ್ಲಿ ವಿನ್ಯಾಸ್ ತನ್ನವನು ಅನ್ನಿಸಿತ್ತು ಹರಿಣಿಗೆ. ತಾನೂ ಅವನವಳಾಗುವ ಹಂಬಲ ಚಿಮ್ಮಿತು. ಬಯಕೆಯ ಕೋಡಿ ಒಡೆಯಲು ಅಷ್ಟೇ ಸಾಕಾಗಿತ್ತು. ಇಬ್ಬರಿಗೂ ಅದೇ ಬೇಕಾಗಿತ್ತು; ಬೆರೆತರು. ಬಂಧವಿಲ್ಲದ ಬಂಧನದಲ್ಲಿ ಸೆರೆಯಾದರು. ಸಮಯ ಯಾರನ್ನೂ ಕೇಳಲಿಲ್ಲ, ಕಾಯಲಿಲ್ಲ. ಪ್ರಕೃತಿ ತನ್ನ ಕೆಲಸ ಮುರಿಯಲಿಲ್ಲ. ಮುಂಜಾಗರೂಕತೆ ಮಾಡಿಯೂ ಹರಿಣಿಯ ಲೆಕ್ಕ ನೆಲೆ ತಪ್ಪಿತ್ತು. ಅಮ್ಮನಿಗೆ ಫೋನ್ ಮಾಡಿದಳು. ‘ಹಾದಿ ತಪ್ಪಿದ ನೀನು ನನ್ನ ಮಗಳೇ ಅಲ್ಲ. ನೀನಿಲ್ಲಿಗೆ ಬಂದು ನನ್ನ ತೌರಲ್ಲಿ ನನ್ನ ಮರ್ಯಾದೆ ತೆಗೀಬೇಡ’ ಅಂದುಬಿಟ್ಟರು ಆ ಮಹಾತಾಯಿ. ಅಮ್ಮನೇ ಹಾಗಂದಮೇಲೆ ಇನ್ನು ಯಾರನ್ನೂ ನೆಚ್ಚಿಕೊಂಡು ಫಲವಿಲ್ಲ ಅನ್ನಿಸಿ ವಿನ್ಯಾಸ್ ಜೊತೆಗೇ ಮಾತೆತ್ತಿದಳು. ನಿನ್ನ ಹಿರಿಯರು ಒಪ್ಪುವ ಹೊತ್ತಿಗೆ ನಾವಿಬ್ರೂ ಅಜ್ಜ-ಅಜ್ಜಿ ಆಗಿರ್ತೀವೇನೋ. ಈಗ್ಲಾದ್ರೂ ದೇವಸ್ಥಾನದಲ್ಲಿ ಮದುವೆ ಆಗೋಣ ಅಂದಳು. ಸಾಧ್ಯವೇ ಇಲ್ಲ. ಹೀಗೇ ಮುಂದುವರಿಯೋದಕ್ಕೂ ಸಾಧ್ಯವಿಲ್ಲ. ತೆಗೆಸಿಕೋ ಅಂದುಬಿಟ್ಟ. ಚಿದಾನಂದ್ ಕೈಚೆಲ್ಲಿದ. ನಿಮ್ಮ ಸಮಸ್ಯೆಯಲ್ಲಿ ನನ್ನದೇನು ಸಾರಥ್ಯ ಅಂತ ಚಾಟಿಯೆತ್ತಿದ. ವಿನ್ಯಾಸ್ ಜೊತೆಯಾಗಿ ಇನ್ನು ಬದುಕುವುದರಲ್ಲಿ ಅರ್ಥವಿಲ್ಲ ಅಂತನ್ನಿಸಿ ಸೀದಾ ನಮ್ಮನೆಗೇ ಬಂದಿದ್ದಾಳೆ. ಈಗೇನ್ ಮಾಡೋದು ಹೇಳಿ...’’ ದೀರ್ಘ ಮೌನ ನಮ್ಮಿಬ್ಬರ ನಡುವೆ ಹಬ್ಬಿಕೊಂಡಿತು.
ಇನ್ನೊಂದು ಅಕ್ಷರಂಗಳ
"ಸುಪ್ತದೀಪ್ತಿ"ಯ ಕಿಟಕಿ->->->
Monday, 20 December 2010
Monday, 13 December 2010
ಸುಮ್ಮನೆ ನೋಡಿದಾಗ...೦೭
ಇಷ್ಟಾಗುವಾಗ ಗಂಟೆ ಮೂರೂವರೆಯ ಆಸುಪಾಸು. ಆಂಟಿ ಸುಮ್ಮನೇ ಕಣ್ಣುಮುಚ್ಚಿ ಧ್ಯಾನಿಸುತ್ತಿದ್ದರು. ಬೇಗ ಹೇಳಬಾರದಾ ಕಥೆಯನ್ನು? ಅವರು ಹೇಳುದನ್ನು ಕೇಳಿ, ನನ್ನ ಕೋಪವನ್ನು (ಅವರು ಹೇಳಿದ ಹಾಗೆ ಕೋಪ ಬಂದ್ರೆ!) ಸರಿಯಾದ ದಾರಿಯಲ್ಲಿ ಹರಿಬಿಟ್ಟು ಸಮಾಧಾನವಾಗಿ ಮನೆಗೆ ಹೋಗಬೇಕಲ್ಲ! ಅದಕ್ಕೆ ಸಮಯ ಬೇಕಲ್ಲ! ನನ್ನ ಚಿಂತೆಯಲ್ಲಿ ನಾನಿದ್ದೆ. ನೇಹಾಳ ಕಂಗಳಲ್ಲಿ ಗೊಂದಲ, ಕುತೂಹಲ ಎರಡರ ಬೆರಕೆ.
ಆಂಟಿ ಶುರು ಮಾಡಿದರು -
ಮೂವತ್ತು ವರ್ಷ ಹಿಂದಿನ ಮಾತು ಅಂತ ಹೇಳಿದ್ನಲ್ಲ. ಅದೂ ನಿಖರ ಅಲ್ಲ. ಅದಕ್ಕೂ ಹಿಂದೆಯೇ ನನ್ನ ಮತ್ತು ಹರಿಣಿಯ ಸ್ನೇಹ ಆಗಿತ್ತು. ನಿಮ್ಮಿಬ್ಬರ ಹಾಗೆಯೇ ನಾವಿಬ್ರೂ ಒಟ್ಟಿಗೇ ಶಾಲೆಗೆ, ಕಾಲೇಜಿಗೆ ಹೋದವರು. ಆಚೀಚೆ ಮನೆಗಳಲ್ಲಿದ್ದು ಅವಳಿಗಳ ಹಾಗೆ ಬೆಳೆದವರು. ಆದ್ರೂ ನಮ್ಮಿಬ್ಬರ ಸ್ವಭಾವ ಮಾತ್ರ ತದ್ವಿರುದ್ಧ. ಅವಳನ್ನು ನಾನ್ಯಾವಾಗಲೂ ‘ಸಿಂಹಿಣಿ’ ‘ವ್ಯಾಘ್ರಿಣಿ’ ಅಂತೆಲ್ಲ ಛೇಡಿಸ್ತಿದ್ದೆ. ಅಷ್ಟೂ ಕೋಪ ಅವಳಿಗೆ. ನಮ್ಮ ಸ್ನೇಹಿತೆಯರೆಲ್ಲ ‘ನಳಿನಿ ತಂಪು - ಹರಿಣಿ ಕೆಂಪು’ ಅಂತ ಮಾತಾಡಿಕೊಳ್ತಿದ್ರು. ನಮ್ಮ ಮುಂದೆಯೂ ಹೇಳಿ ಹರಿಣಿಯಿಂದ ಬೈಸಿಕೊಂಡು ಪೆಟ್ಟು ತಿಂದು ಬೇಜಾರು ಮಾಡಿಕೊಂಡವರೂ ಕಡಿಮೆಯಿಲ್ಲ. ಆದ್ರೂ ನಮ್ಮ ಸ್ನೇಹ ಮಾತ್ರ ಅದು ಹೇಗೋ ಮುಂದುವರೀತು. ಎಲ್ಲರಿಗೂ ಆಶ್ಚರ್ಯ, ನನಗೂ. ಅವಳಿಗೆ ಮಾತ್ರ ನನ್ನ ಶಾಂತ ಸ್ವಭಾವದಿಂದ ತುಂಬಾ ಅನುಕೂಲ ಆಗ್ತಿತ್ತು. ಅವಳ ತಾಂಡವವನ್ನು ಕಂಟ್ರೋಲ್ ಮಾಡ್ಲಿಕ್ಕೆ ನನ್ನಿಂದ ಮಾತ್ರ ಸಾದ್ಯ ಅಂತ ಶಾಲೆಯಲ್ಲೆಲ್ಲ ಮಾತಿತ್ತು.
ಕಾಲೇಜಿನ ಎರಡನೇ ವರ್ಷದಲ್ಲಿರುವಾಗ ಅವಳಪ್ಪ ಆಸ್ತಿ ವ್ಯಾಜ್ಯದಲ್ಲಿ ಕೊಲೆಯಾದರು. ಅವಳಮ್ಮ ತೌರಿಗೆ ಹೊರಟು ನಿಂತ್ರು. ಕಾಡಿಬೇಡಿ ಹರಿಣಿ ಉಪವಾಸ ಕೂತು ಅಮ್ಮನನ್ನು ಒಪ್ಪಿಸಿ ಅದೊಂದು ವರ್ಷ ನಮ್ಮ ಮನೆಯಿಂದಲೇ ಕಾಲೇಜಿಗೆ ಹೋದಳು. ಕೊನೆಯ ವರ್ಷವನ್ನು ಬೇರೊಂದು ಕಾಲೇಜಿಗೆ ಟ್ರಾನ್ಸ್ಫ಼ರ್ ಮಾಡಿಸಿಕೊಂಡರು ಅವಳಜ್ಜಿ ಮನೆಯವರು. ನಮ್ಮಿಬ್ಬರ ನಡುವೆ ಪತ್ರ ವ್ಯವಹಾರ ಮಾತ್ರ ಉಳೀತು, ಅದೂ ಸ್ವಲ್ಪ ಸಮಯ ಮಾತ್ರ. ಅವಳ ಸೋದರ ಮಾವ ಹದ್ದಿನ ಕಣ್ಣಿನ ಗೂರ್ಖಾ ಅಂತ ನಾವಿಬ್ರೂ ತಮಾಷೆ ಮಾಡಿಕೊಂಡಿದ್ದೆವು ಕಾಗದದಲ್ಲಿ. ಅವಳ ಕೋಪಾಟೋಪ ಎಲ್ಲಿಂದ ಬಂತೂಂತ ಗೊತ್ತಾಯ್ತು ಅಂದಿದ್ದೆ ನಾನು. ಕಾಲಕ್ರಮೇಣ ಮಾವನ ಅಂಕೆಯೊಳಗೆ ಕಾಗದ ಬರೆಯುವುದೂ ನಿಂತಿತು. ಒಂದೂವರೆ ವರ್ಷ ಕಾಲ ಅವಳ ಸುದ್ದಿಯೇ ಇರಲಿಲ್ಲ.
ನನ್ನ ಮದುವೆಯ ಸುದ್ದಿ ಕೇಳಿ ಹಿಂದಿನ ದಿನವೇ ಬಂದವಳು ನನ್ನ ಒಟ್ಟಿಗೇ ಇದ್ದಳು. ಮದುವಣಗಿತ್ತಿಯ ಜೊತೆಗಾತಿಯಾಗಿ ನನ್ನತ್ತೆ ಮನೆಗೂ ಬಂದಳು. ನನ್ನ ಸುಮುಖ್ ಕೂಡಾ ಇವಳನ್ನು ಸ್ನೇಹಿತೆಯಾಗಿ ಆದರಿಸಿ ಮೆಚ್ಚಿಕೊಂಡರು. ಎರಡು ದಿನ ಅಲ್ಲಿದ್ದು ನಂತರ, ‘ಬೆಂಗಳೂರಲ್ಲಿ ಕೆಲ್ಸ ಸಿಕ್ಕಿದೆ, ಚಿನ್ಮಯ್ ಕನ್ಸಲ್ಟೆನ್ಸಿಯಲ್ಲಿ ಮ್ಯಾನೇಜರ್ ನಮ್ಮಾವನ ಪರಿಚಯ. ಪಿ.ಎ. ಆಗಿ ತಗೊಂಡಿದಾರೆ. ಅವ್ರ ಹಂಗು ಬೇಡಾಂತ ಅನ್ನಿಸಿದ್ರೂ ಒಮ್ಮೆ ಅಜ್ಜಿ ಮನೆಯಿಂದ ಹೊರಗೆ ಬರ್ಬೇಕು ಅಂತ ಒಪ್ಪಿಕೊಂಡೆ. ಇನ್ನು ಕಾಗದ ಬರೀತಿರ್ತೇನೆ, ಆಯ್ತಾ?’ ಅಂದಳು. ಮರುದಿನವೇ ಬೆಂಗಳೂರಿಗೆ ಹೋಗಿದ್ದಳು.
ನಾನು ಈ ಊರಲ್ಲೇ ನೆಲೆಸಿದೆ. ಬೆಂಗಳೂರಿಂದ ವಾರಕ್ಕೊಮ್ಮೆ ಬರುವ ಅವಳ ಕಾಗದಗಳಲ್ಲಿ ಅಲ್ಲಿನ ವೈಶಿಷ್ಟ್ಯಗಳೇ ತುಂಬಿರುತ್ತಿದ್ದವು. ಅವಳ ವೈಯಕ್ತಿಕ ವಿಷಯ ಅಷ್ಟೇನೂ ಬರೀತಿರಲಿಲ್ಲ. ನಾನಾಗಿ ಕೇಳಿದ್ರೆ, ‘ಹೇಳಿಕೊಳ್ಳುವಂಥಾದ್ದೇನೂ ಇಲ್ಲ. ಎಲ್ಲ ಮಾಮೂಲು. ಬೆಳಗ್ಗಿಂದ ಸಂಜೆ ತನ್ಕ ಬಾಸ್ ಹೇಳಿದ ಕೆಲ್ಸ ಮಾಡಿಕೊಂಡಿರುದು. ಸಂಜೆ ರೂಮಿಗೆ ಬಂದು ರೇಡಿಯೋ ಕೇಳುದು. ಅಡುಗೆ, ಪಾತ್ರೆ, ಬಟ್ಟೆ, ಎಲ್ಲ ಕೆಲ್ಸಗಳನ್ನು ಮಾಡ್ಕೊಳ್ಳುದು. ಅದೇ ಜೀವನ. ಅದನ್ನೇನು ಬರಿಯುದು’ ಅಂತಿದ್ಳು.
ಸುಮಾರು ಐದು ವರ್ಷದ ನಂತ್ರ ಒಂದು ಬೆಳಿಗ್ಗೆ ನಮ್ಮನೆ ಬಾಗಿಲಲ್ಲಿ ಕೆಂಪುಕಣ್ಣಿನಲ್ಲಿ ನೀರು ಹರಿಸುತ್ತಾ ಪ್ರತ್ಯಕ್ಷ ಆದ್ಳು. ಬೆಂಗಳೂರಿಂದ ಸೀದಾ ಇಲ್ಲಿಗೇ ಬಂದಿದ್ಳು. ಒಳಗೆ ಕರೆದು ಸಮಾಧಾನ ಮಾಡುವ ಹೊತ್ತಿಗೆ ನಂಗೆ ಸಾಕೋಸಾಕಾಗಿತ್ತು. ಆದ್ರೂ ಅಳು ಯಾಕೆ ಅನ್ನುದನ್ನು ಮಾತ್ರ ಬಾಯಿ ಬಿಡಲೇ ಇಲ್ಲ, ಸಂಜೇತನ್ಕ. ಆವತ್ತು ಸುಮುಖ್ ಅವ್ರ ತಂಗಿಯ ಮನೆಗೆ ಹೋಗಿದ್ರು. ರಾತ್ರೆಯೆಲ್ಲ ಅವಳ ಕಥೆ ಕೇಳಿ ಬೆಳಗಾದಾಗ ನಮ್ಮಿಬ್ಬರ ಕಂಗಳೂ ಕೆಂಪು ಕೆಂಪು. ಮಧ್ಯಾಹ್ನ ಸುಮುಖ್ ಬರುವ ಹೊತ್ತಿಗೆ ನಾನೊಂದು ನಿರ್ಧಾರಕ್ಕೆ ಬಂದಿದ್ದೆ. ಅದನ್ನು ಅವರಿಗೆ ಹೇಳಲಿಕ್ಕೆ ಸಮಯ ಕಾಯುತ್ತಿದ್ದೆ. ಮನೆಯಲ್ಲಿ ಬಿರುಗಾಳಿ ಏಳಬಹುದೆನ್ನುವ ಊಹೆಯಿಂದ ಏನೇನೋ ಕಾಲ್ಪನಿಕ ತಡೆಗೋಡೆಗಳನ್ನು ಸಿದ್ಧಮಾಡಿಕೊಂಡೆ. ಶಾಂತವಾಗಿರುತ್ತಿದ್ದ ನಳಿನಿ ಅಂದು ಅಶಾಂತಿಯ ನೆಲೆಯಾಗಿದ್ದೆ.
***
ಆಂಟಿ ಶುರು ಮಾಡಿದರು -
ಮೂವತ್ತು ವರ್ಷ ಹಿಂದಿನ ಮಾತು ಅಂತ ಹೇಳಿದ್ನಲ್ಲ. ಅದೂ ನಿಖರ ಅಲ್ಲ. ಅದಕ್ಕೂ ಹಿಂದೆಯೇ ನನ್ನ ಮತ್ತು ಹರಿಣಿಯ ಸ್ನೇಹ ಆಗಿತ್ತು. ನಿಮ್ಮಿಬ್ಬರ ಹಾಗೆಯೇ ನಾವಿಬ್ರೂ ಒಟ್ಟಿಗೇ ಶಾಲೆಗೆ, ಕಾಲೇಜಿಗೆ ಹೋದವರು. ಆಚೀಚೆ ಮನೆಗಳಲ್ಲಿದ್ದು ಅವಳಿಗಳ ಹಾಗೆ ಬೆಳೆದವರು. ಆದ್ರೂ ನಮ್ಮಿಬ್ಬರ ಸ್ವಭಾವ ಮಾತ್ರ ತದ್ವಿರುದ್ಧ. ಅವಳನ್ನು ನಾನ್ಯಾವಾಗಲೂ ‘ಸಿಂಹಿಣಿ’ ‘ವ್ಯಾಘ್ರಿಣಿ’ ಅಂತೆಲ್ಲ ಛೇಡಿಸ್ತಿದ್ದೆ. ಅಷ್ಟೂ ಕೋಪ ಅವಳಿಗೆ. ನಮ್ಮ ಸ್ನೇಹಿತೆಯರೆಲ್ಲ ‘ನಳಿನಿ ತಂಪು - ಹರಿಣಿ ಕೆಂಪು’ ಅಂತ ಮಾತಾಡಿಕೊಳ್ತಿದ್ರು. ನಮ್ಮ ಮುಂದೆಯೂ ಹೇಳಿ ಹರಿಣಿಯಿಂದ ಬೈಸಿಕೊಂಡು ಪೆಟ್ಟು ತಿಂದು ಬೇಜಾರು ಮಾಡಿಕೊಂಡವರೂ ಕಡಿಮೆಯಿಲ್ಲ. ಆದ್ರೂ ನಮ್ಮ ಸ್ನೇಹ ಮಾತ್ರ ಅದು ಹೇಗೋ ಮುಂದುವರೀತು. ಎಲ್ಲರಿಗೂ ಆಶ್ಚರ್ಯ, ನನಗೂ. ಅವಳಿಗೆ ಮಾತ್ರ ನನ್ನ ಶಾಂತ ಸ್ವಭಾವದಿಂದ ತುಂಬಾ ಅನುಕೂಲ ಆಗ್ತಿತ್ತು. ಅವಳ ತಾಂಡವವನ್ನು ಕಂಟ್ರೋಲ್ ಮಾಡ್ಲಿಕ್ಕೆ ನನ್ನಿಂದ ಮಾತ್ರ ಸಾದ್ಯ ಅಂತ ಶಾಲೆಯಲ್ಲೆಲ್ಲ ಮಾತಿತ್ತು.
ಕಾಲೇಜಿನ ಎರಡನೇ ವರ್ಷದಲ್ಲಿರುವಾಗ ಅವಳಪ್ಪ ಆಸ್ತಿ ವ್ಯಾಜ್ಯದಲ್ಲಿ ಕೊಲೆಯಾದರು. ಅವಳಮ್ಮ ತೌರಿಗೆ ಹೊರಟು ನಿಂತ್ರು. ಕಾಡಿಬೇಡಿ ಹರಿಣಿ ಉಪವಾಸ ಕೂತು ಅಮ್ಮನನ್ನು ಒಪ್ಪಿಸಿ ಅದೊಂದು ವರ್ಷ ನಮ್ಮ ಮನೆಯಿಂದಲೇ ಕಾಲೇಜಿಗೆ ಹೋದಳು. ಕೊನೆಯ ವರ್ಷವನ್ನು ಬೇರೊಂದು ಕಾಲೇಜಿಗೆ ಟ್ರಾನ್ಸ್ಫ಼ರ್ ಮಾಡಿಸಿಕೊಂಡರು ಅವಳಜ್ಜಿ ಮನೆಯವರು. ನಮ್ಮಿಬ್ಬರ ನಡುವೆ ಪತ್ರ ವ್ಯವಹಾರ ಮಾತ್ರ ಉಳೀತು, ಅದೂ ಸ್ವಲ್ಪ ಸಮಯ ಮಾತ್ರ. ಅವಳ ಸೋದರ ಮಾವ ಹದ್ದಿನ ಕಣ್ಣಿನ ಗೂರ್ಖಾ ಅಂತ ನಾವಿಬ್ರೂ ತಮಾಷೆ ಮಾಡಿಕೊಂಡಿದ್ದೆವು ಕಾಗದದಲ್ಲಿ. ಅವಳ ಕೋಪಾಟೋಪ ಎಲ್ಲಿಂದ ಬಂತೂಂತ ಗೊತ್ತಾಯ್ತು ಅಂದಿದ್ದೆ ನಾನು. ಕಾಲಕ್ರಮೇಣ ಮಾವನ ಅಂಕೆಯೊಳಗೆ ಕಾಗದ ಬರೆಯುವುದೂ ನಿಂತಿತು. ಒಂದೂವರೆ ವರ್ಷ ಕಾಲ ಅವಳ ಸುದ್ದಿಯೇ ಇರಲಿಲ್ಲ.
ನನ್ನ ಮದುವೆಯ ಸುದ್ದಿ ಕೇಳಿ ಹಿಂದಿನ ದಿನವೇ ಬಂದವಳು ನನ್ನ ಒಟ್ಟಿಗೇ ಇದ್ದಳು. ಮದುವಣಗಿತ್ತಿಯ ಜೊತೆಗಾತಿಯಾಗಿ ನನ್ನತ್ತೆ ಮನೆಗೂ ಬಂದಳು. ನನ್ನ ಸುಮುಖ್ ಕೂಡಾ ಇವಳನ್ನು ಸ್ನೇಹಿತೆಯಾಗಿ ಆದರಿಸಿ ಮೆಚ್ಚಿಕೊಂಡರು. ಎರಡು ದಿನ ಅಲ್ಲಿದ್ದು ನಂತರ, ‘ಬೆಂಗಳೂರಲ್ಲಿ ಕೆಲ್ಸ ಸಿಕ್ಕಿದೆ, ಚಿನ್ಮಯ್ ಕನ್ಸಲ್ಟೆನ್ಸಿಯಲ್ಲಿ ಮ್ಯಾನೇಜರ್ ನಮ್ಮಾವನ ಪರಿಚಯ. ಪಿ.ಎ. ಆಗಿ ತಗೊಂಡಿದಾರೆ. ಅವ್ರ ಹಂಗು ಬೇಡಾಂತ ಅನ್ನಿಸಿದ್ರೂ ಒಮ್ಮೆ ಅಜ್ಜಿ ಮನೆಯಿಂದ ಹೊರಗೆ ಬರ್ಬೇಕು ಅಂತ ಒಪ್ಪಿಕೊಂಡೆ. ಇನ್ನು ಕಾಗದ ಬರೀತಿರ್ತೇನೆ, ಆಯ್ತಾ?’ ಅಂದಳು. ಮರುದಿನವೇ ಬೆಂಗಳೂರಿಗೆ ಹೋಗಿದ್ದಳು.
ನಾನು ಈ ಊರಲ್ಲೇ ನೆಲೆಸಿದೆ. ಬೆಂಗಳೂರಿಂದ ವಾರಕ್ಕೊಮ್ಮೆ ಬರುವ ಅವಳ ಕಾಗದಗಳಲ್ಲಿ ಅಲ್ಲಿನ ವೈಶಿಷ್ಟ್ಯಗಳೇ ತುಂಬಿರುತ್ತಿದ್ದವು. ಅವಳ ವೈಯಕ್ತಿಕ ವಿಷಯ ಅಷ್ಟೇನೂ ಬರೀತಿರಲಿಲ್ಲ. ನಾನಾಗಿ ಕೇಳಿದ್ರೆ, ‘ಹೇಳಿಕೊಳ್ಳುವಂಥಾದ್ದೇನೂ ಇಲ್ಲ. ಎಲ್ಲ ಮಾಮೂಲು. ಬೆಳಗ್ಗಿಂದ ಸಂಜೆ ತನ್ಕ ಬಾಸ್ ಹೇಳಿದ ಕೆಲ್ಸ ಮಾಡಿಕೊಂಡಿರುದು. ಸಂಜೆ ರೂಮಿಗೆ ಬಂದು ರೇಡಿಯೋ ಕೇಳುದು. ಅಡುಗೆ, ಪಾತ್ರೆ, ಬಟ್ಟೆ, ಎಲ್ಲ ಕೆಲ್ಸಗಳನ್ನು ಮಾಡ್ಕೊಳ್ಳುದು. ಅದೇ ಜೀವನ. ಅದನ್ನೇನು ಬರಿಯುದು’ ಅಂತಿದ್ಳು.
ಸುಮಾರು ಐದು ವರ್ಷದ ನಂತ್ರ ಒಂದು ಬೆಳಿಗ್ಗೆ ನಮ್ಮನೆ ಬಾಗಿಲಲ್ಲಿ ಕೆಂಪುಕಣ್ಣಿನಲ್ಲಿ ನೀರು ಹರಿಸುತ್ತಾ ಪ್ರತ್ಯಕ್ಷ ಆದ್ಳು. ಬೆಂಗಳೂರಿಂದ ಸೀದಾ ಇಲ್ಲಿಗೇ ಬಂದಿದ್ಳು. ಒಳಗೆ ಕರೆದು ಸಮಾಧಾನ ಮಾಡುವ ಹೊತ್ತಿಗೆ ನಂಗೆ ಸಾಕೋಸಾಕಾಗಿತ್ತು. ಆದ್ರೂ ಅಳು ಯಾಕೆ ಅನ್ನುದನ್ನು ಮಾತ್ರ ಬಾಯಿ ಬಿಡಲೇ ಇಲ್ಲ, ಸಂಜೇತನ್ಕ. ಆವತ್ತು ಸುಮುಖ್ ಅವ್ರ ತಂಗಿಯ ಮನೆಗೆ ಹೋಗಿದ್ರು. ರಾತ್ರೆಯೆಲ್ಲ ಅವಳ ಕಥೆ ಕೇಳಿ ಬೆಳಗಾದಾಗ ನಮ್ಮಿಬ್ಬರ ಕಂಗಳೂ ಕೆಂಪು ಕೆಂಪು. ಮಧ್ಯಾಹ್ನ ಸುಮುಖ್ ಬರುವ ಹೊತ್ತಿಗೆ ನಾನೊಂದು ನಿರ್ಧಾರಕ್ಕೆ ಬಂದಿದ್ದೆ. ಅದನ್ನು ಅವರಿಗೆ ಹೇಳಲಿಕ್ಕೆ ಸಮಯ ಕಾಯುತ್ತಿದ್ದೆ. ಮನೆಯಲ್ಲಿ ಬಿರುಗಾಳಿ ಏಳಬಹುದೆನ್ನುವ ಊಹೆಯಿಂದ ಏನೇನೋ ಕಾಲ್ಪನಿಕ ತಡೆಗೋಡೆಗಳನ್ನು ಸಿದ್ಧಮಾಡಿಕೊಂಡೆ. ಶಾಂತವಾಗಿರುತ್ತಿದ್ದ ನಳಿನಿ ಅಂದು ಅಶಾಂತಿಯ ನೆಲೆಯಾಗಿದ್ದೆ.
Labels:
ಕಥನಕಾರಣ,
ತುಂಟ-ತುಡುಗ-ತರಲೆ-ಮನ,
ನೀಳ್ಗತೆ
Subscribe to:
Posts (Atom)