ಗೇಟಿನ ಬಳಿ ನಾನು ನಿಂತದ್ದನ್ನು ನೋಡಿದ ನೇಹಾ ಓಡಿ ಬಂದು ನನ್ನನ್ನು ಅಲ್ಲಿಗೇ ಎಳೆದೊಯ್ದಳು. ಸುಮುಖ್ ಅಂಕಲ್ ಹರ್ಷಣ್ಣನ ಜೊತೆ ಮಾತಾಡುತ್ತಿದ್ದರು. ನಳಿನಿ ಅಂಟಿ ಹೊಸದೊಂದು ಮಹಿಳೆಯ ಜೊತೆ ಮಾತಾಡುತ್ತಿದ್ದರು. ಜಾಜಿಪೊದೆಯ ನಡುವಿನ ಗುಬ್ಬಚ್ಚಿ ಗೂಡನ್ನು ದಿಟ್ಟಿಸುತ್ತಾ ನಿಂತಿದ್ದವರ ಬೆನ್ನು ಮಾತ್ರ ಕಾಣುತ್ತಿತ್ತು. ನನ್ನೊಳಗೆ ಯಾಕೋ ಯಾವುದೋ ಅರಿಯದ ಉದ್ವೇಗ ತುಂಬಿಕೊಳ್ಳತೊಡಗಿತು.
ನಮ್ಮಿಬ್ಬರನ್ನು ಕಂಡವನೇ ಹರ್ಷಣ್ಣ ಹತ್ತಿರ ಬಂದು ಜೋರಾಗಿಯೇ ತಲೆಯ ಮೇಲೆ ಮೊಟಕಿದ. ‘ಆಆಆಆಯ್’ ಸ್ವರ ಕರೆಯದೆಯೇ ಹೊರಬಂತು. ಗುಬ್ಬಚ್ಚಿ ಗೂಡನ್ನು ನೋಡುತ್ತಿದ್ದ ವ್ಯಕ್ತಿ ಇತ್ತ ತಿರುಗಿತು. ನನ್ನ ಸ್ವರ ಮತ್ತೆ ಗಂಟಲಲ್ಲೇ ಹುದುಗಿತು. ಹೃದಯದ ತಾಳ ಏರುಪೇರಾಯಿತು. ಮುಖ ಕೆಂಪಾಯಿತೇ? ಆಕಾಶವೇ ಕೆಳಗಿಳಿಯಿತೆ? ನೆಲ ನೆಲೆ ತಪ್ಪಿತೆ? ಕಣ್ಣು ಕತ್ತಲಿಟ್ಟು ಬೀಳುವ ಮೊದಲೇ ನೇಹಾಳನ್ನು ಆದರಿಸಿಕೊಂಡೆ. ಇನ್ನೊಂದು ಬದಿಯಿಂದ ಹರ್ಷಣ್ಣನ ಆಸರೆ. ನಳಿನಿ ಆಂಟಿಯ ಜೊತೆ ಮಾತಾಡುತ್ತಿದ್ದ ಮಹಿಳೆಯೂ ಇತ್ತ ತಿರುಗಿದರು. ಎಂಥ ಸುಂದರಿ, ಈ ವಯಸ್ಸಲ್ಲೂ. ಅವನ ಅಮ್ಮನೇ ಇರಬೇಕು, ಅದೇ ಕಣ್ಣು-ಮೂಗು. ಲಕ್ಷಣಕ್ಕೇ ಲಕ್ಷಣವ್ಯಾಖ್ಯೆ ಇವರು.
ನಾನು ಸುಧಾರಿಸಿಕೊಂಡದ್ದನ್ನು ನೋಡಿದ ಹರ್ಷಣ್ಣ ಮತ್ತೊಮ್ಮೆ ತಲೆಗೆ ಮೊಟಕಿದ, ಈ ಸಲ ಹದವಾಗಿಯೇ. ಕಣ್ಣು ನೆಲ ನೋಡಿತಷ್ಟೇ. ಅದ್ಯಾವ ಘಳಿಗೆಯಲ್ಲೋ ಒಳಗೆ ಹೋಗಿದ್ದ ನಳಿನಿ ಆಂಟಿ ಟೀ ಲೋಟ ಹಿಡಿದು ಬಂದರು. ಆಗಲೇ ಧಾರಾಳವಾಗಿ ಕಪ್ಪಿಟ್ಟಿದ್ದ ಆಗಸ ಈಗಲೋ ಮತ್ಯಾವಾಗಲೋ ಸುರಿಯುವಂತೆ ತುಂಬು ಮೋಡಗಳಿಂದ ಉಯ್ಯಾಲೆಯಾಡುತ್ತಿತ್ತು. ಹಿತವಾದ ಗಾಳಿ ಬೀಸುತ್ತಿತ್ತು. ಟೀ ಮುದ ಕೊಟ್ಟಿತು. ಗುಬ್ಬಚ್ಚಿಗಳು ಕಿಚಪಿಚವೆಂದಾಗ ಅಕಸ್ಮಾತ್ ತಲೆಯೆತ್ತಿದೆ. ಅವನ ನೋಟ ಅದ್ಯಾಕೆ ನನ್ನತ್ತಲೇ ಇತ್ತು? ಗುಬ್ಬಚ್ಚಿ ಕಾಣಲೇ ಇಲ್ಲ, ನೆಲ ಕಂಡಿತು. ಮತ್ತೆರಡು ಯುಗಗಳ ನಂತರ ತಲೆಯೆತ್ತಿದಾಗ ನಮ್ಮಿಬ್ಬರ ಹೊರತು ಜಾಜಿ ಮಂಟಪ ಬರಿದಾಗಿತ್ತು. ಅವನ್ಯಾಕೆ ಇಲ್ಲಿ ಬಂದ? ಯಾರು ಕರೆದರು? ಯಾಕೆ? ಉತ್ತರಗಳು ನನ್ನೊಳಗಿರಲಿಲ್ಲ. ಅವನಲ್ಲಿರಬಹುದೆ? ಗೊತ್ತಿಲ್ಲ. ಹೇಗೆ ಕೇಳಲಿ? ಛೇ! ಕಾಲೇಜಿನ ಬೋಲ್ಡ್ ಶಿಶಿರ ನಾನೇನಾ? ಇದ್ಯಾಕೆ ಹೀಗೆ ಕೋಲ್ಡ್ ಆಗಿಬಿಟ್ಟೆ?
‘ಯಾಕೆ ಶಿಶಿರಾ ಏನೂ ಮಾತಾಡುದಿಲ್ಲ? ಹೆದ್ರಿಕೆ, ಗಾಬರಿ ಆಗುವಂಥಾದ್ದು ಏನೂ ಇಲ್ಲವಲ್ಲ ಇಲ್ಲಿ...’ ಈ ಸ್ವರ ನನಗೇನೂ ಹೊಸದಲ್ಲ, ಕಾಲೇಜಲ್ಲಿ ಕೇಳಿದ್ದೇ. ಆದರೆ ಇದನ್ನು ಜೇನಲ್ಲಿಟ್ಟು ತೆಗೆದವರು ಯಾರು? ಹೇಗೆ?
‘ನಾನಿಲ್ಲಿಗೆ ಹೇಗೆ, ಯಾಕೆ ಬಂದೆ ಅಂತ ಯೋಚನೆ ನಿಮಗೆ, ಅಲ್ವಾ?’ ತಟ್ಟನೆ ಅವನ ಮುಖ ನೋಡಿದೆ. ಇವನಿಗೇನು ಅಂಜನವಿದ್ಯೆ ಗೊತ್ತುಂಟಾ?
‘ಹರ್ಷ ನನ್ನ ಕ್ಲಾಸ್ಮೇಟ್. ಅವನೇ ನಮ್ಮನ್ನು ಕರ್ದದ್ದು ಇವತ್ತು. ಹೀಗೇ ಮಾತಾಡುವಾಗ ಅಮ್ಮನೂ ನಳಿನಿಯವರೂ ಹೇಗೋ ನೆಂಟರು ಅಂತಲೂ ಗೊತ್ತಾಯ್ತು. ಹಾಗೆ ಇಲ್ಲಿಯೇ ಮಾತಾಡ್ತಾ ನಿಂತೆವು. ನಿಮ್ಮನ್ನು ಇಲ್ಲಿಗೆ ಬರ್ಲಿಕ್ಕೆ ಹೇಳಿದ್ದೂ ಹರ್ಷನೇ. ಸಮಾಧಾನ ಆಯ್ತಾ? ಹೆದ್ರಿಕೆ ಹೋಯ್ತಾ? ಇನ್ನಾದ್ರೂ ಮಾತಾಡ್ಬಹುದಾ? ಒಬ್ಬನೇ ಮಾತಾಡ್ತಿದ್ದೇನೆ, ನನ್ನಷ್ಟಕ್ಕೇ... ತಲೆ ಕೆಟ್ಟಿದೆ ಅಂದ್ಕೊಳ್ತಾರೆ ನೋಡಿದವರು! ಮಾತಾಡಿ...’
‘ಏನು ಮಾತಾಡ್ಲಿ?’
ಇನ್ನೊಂದು ಅಕ್ಷರಂಗಳ
"ಸುಪ್ತದೀಪ್ತಿ"ಯ ಕಿಟಕಿ->->->
Tuesday, 26 April 2011
Monday, 18 April 2011
ಸುಮ್ಮನೆ ನೋಡಿದಾಗ...೨೨
ಹಗಲು ಹೇಗೆ ಓಡಿತೋ ಸಂಜೆ ಹೇಗಾಯ್ತೋ ಗೊತ್ತಾಗಲೇ ಇಲ್ಲ.
ಶ್ರಿಯಾಲಂಕಾರ್- ನಮ್ಮೂರಿನ ದೊಡ್ಡ ಬಟ್ಟೆಯಂಗಡಿ. ಎಷ್ಟೋ ಕಾಲದಿಂದಲೂ ಇದ್ದ ಈ ಅಂಗಡಿಯಲ್ಲೇ ಸರೋಜಾ ಆಂಟಿ, ನಳಿನಿ ಆಂಟಿ, ಸುಮುಖ್ ಅಂಕಲ್ ಯಾವಾಗಲೂ ವ್ಯವಹಾರ ಮಾಡುತ್ತಿದ್ದ ಕಾರಣ ನಮಗೆಲ್ಲ ಭಾರೀ ಸ್ವಾಗತವೇ ಸಿಕ್ಕಿತು. ಹರ್ಷಣ್ಣ ಮತ್ತು ಸುಮುಖ್ ಅಂಕಲ್ ಜೊತೆಯಲ್ಲಿ ನಾವೈದು ಹೆಂಗಸರು. ಅಂಗಡಿ ತುಂಬಾ ನಮ್ಮದೇ ಗೌಜಿ-ಗಲಾಟೆ. ಎಲ್ಲರಿಗೂ ಪರಿಚಯವಿರುವ ಉತ್ಸಾಹ ಸಲುಗೆ ಮಾತುಕತೆಯಲ್ಲಿ ಎದ್ದು ಕಾಣುತ್ತಿತ್ತು. ಅಂಗಡಿ ಮಾಲೀಕ ಸ್ವತಃ ನಮ್ಮ ಮುಂದೆ ನಿಂತಿದ್ದರು, ಸೀರೆಗಳನ್ನು ಬಿಡಿಸಿ ತೋರಿಸಿ ವೈವಿಧ್ಯ ವೈಶಿಷ್ಠ್ಯಗಳನ್ನು ವಿವರಿಸಲು.
ನೇಹಾ ತನಗಾಗಿ ಮೂರು-ನಾಲ್ಕು ಸೀರೆಗಳನ್ನು ಆರಿಸಿಕೊಳ್ಳಬೇಕಾಗಿತ್ತು. ಅವಳಿಗೆ ಮೆಚ್ಚಾದದ್ದು ಅಂಕಲ್ ಮತ್ತು ಹರ್ಷಣ್ಣನನ್ನು ಪೆಚ್ಚಾಗಿಸುತ್ತಿತ್ತು. ಅವರ ಇಷ್ಟ ಇವಳಿಗೆ ಕಷ್ಟವಾಗುತ್ತಿತ್ತು. ಇದೇ ಜಟಾಪಟಿ ನಡೀತಿರುವಾಗ ಅಮ್ಮ ಮತ್ತು ನಳಿನಿ ಆಂಟಿ ತಮ್ಮ ತಮ್ಮ ಕಣ್ಣು ಒಪ್ಪಿದ ಸೀರೆಗಳನ್ನು ಹೆಕ್ಕಿಕೊಂಡು ಸರೋಜ ಆಂಟಿಯ ಸಹಾಯಕ್ಕೆ ನಿಂತಿದ್ದರು. ನಾವಿಬ್ಬರೂ ಸೀರೆಗಳ ಅಟ್ಟಿಗಳ ನಡುವೆ ತಲೆಕೆರೆಯುತ್ತಾ ಪಿಳಿಪಿಳಿ ಮಾಡುತ್ತಾ ಕೂತಿದ್ದಾಗ ಅಂಕಲ್ ಮತ್ತು ಹರ್ಷಣ್ಣ ಒಟ್ಟಾಗಿ ನಾಲ್ಕು ಸೀರೆಗಳನ್ನು ತಂದು ನಮ್ಮ ಮುಂದೆ ಇಟ್ಟರು.
‘ನೇಹಾ, ಇದು ನಿಶ್ಚಿತಾರ್ಥಕ್ಕೆ, ಇದು ಧಾರೆಗೆ, ಇದು ಔತಣಕ್ಕೆ, ಇದು ಶಿಶಿರನಿಗೆ...’ ಅಂಕಲ್ ಕೊನೆಯ ಮಾತೆಂಬಂತೆ ಹೇಳಿದಾಗ ಅವರ ಆಯ್ಕೆಗಳನ್ನು ಮರುಮಾತಿಲ್ಲದೆ ನೇವರಿಸಿದೆವು.
‘ಇಷ್ಟು ಹೊತ್ತು ಈ ಸೀರೆಗಳು ಎಲ್ಲಿ ಅಡಗಿದ್ದವು? ಇವುಗಳನ್ನು ನಮಗೆ ಯಾಕೆ ತೋರಿಸ್ಲಿಲ್ಲ ನೀವು?’ ನೇಹಾ ಅಂಗಡಿ ಹುಡುಗರನ್ನೇ ತರಾಟೆಗೆಳೆದಳು. ಅವರೆಲ್ಲ ಸುಮ್ಮನೇ ಮುಖಮುಖ ನೋಡುವಾಗ, ‘ಇಷ್ಟ ಆಗದಿದ್ರೆ ಬದಲಾಯಿಸುವಾ. ಒತ್ತಾಯ ಏನಿಲ್ಲ’ ಎಂದ ಹರ್ಷಣ್ಣ. ನೇಹಾ ಸುಮ್ಮನೇ ತಲೆಯಾಡಿಸಿ ಸೀರೆಗಳನ್ನು ಮಡಿಲಲ್ಲಿರಿಸಿಕೊಂಡಾಗ, ‘ಬಿಲ್ ಮಾಡಿ ಪ್ಯಾಕ್ ಮಾಡಿ ಕೊಡ್ತೇವಮ್ಮಾ, ಇಲ್ಲಿ ಕೊಡಿ’ ಅಂತ ಕೈ ನೀಡಿದರು ಅಂಗಡಿ ಯಜಮಾನರು. ಕೆನ್ನೆಗಳು ಇನ್ನಷ್ಟು ಕೆಂಪಾದವು.
ಜೂನ್ ಮೂವತ್ತರಂದು ಮದುವೆಯೆಂದು ನಿಶ್ಚಯವಾಯ್ತು. ಔಪಚಾರಿಕವಾಗಿ ನಿಶ್ಚಿತಾರ್ಥವೂ ನಡೆಯಿತು. ಇವೆಲ್ಲದರ ನಡುವೆ ಅಮ್ಮನ ವಿರೋಧವನ್ನೂ ಲೆಕ್ಕಿಸದೆ ಎಮ್.ಎಸ್ಸಿ.ಗೆ ಅರ್ಜಿ ಹಾಕಿದೆ. ಜುಲೈ ಹದಿನೆಂಟರಂದು ವಿ.ವಿ. ಕ್ಯಾಂಪಸ್ಸಿನಲ್ಲಿ ಹಾಜರಾಗಬೇಕೆನ್ನುವ ಆಜ್ಞಾಪತ್ರವೂ ಬಂತು. ಅಮ್ಮನ ರಾಗ ಏರುತ್ತಿತ್ತು. ನೇಹಾಳ ಮದುವೆ ನೆಪದಲ್ಲಿ ಹೆಚ್ಚಾಗಿ ಅಲ್ಲೇ ಇರುವ ಅವಕಾಶ ಹುಡುಕುತ್ತಿದ್ದೆ ನಾನು. ನಮ್ಮ ಮಾತಿನ ನಡುವೆ ಆಗೊಮ್ಮೆ ಈಗೊಮ್ಮೆ ವಸಂತ್ ನುಸುಳುತ್ತಿದ್ದ. ಬಲವಂತವಾಗಿ ನೇಹಾಳ ಬಾಯಿ ಮುಚ್ಚಿಸುವುದಾಗಿತ್ತು. ಸುಮುಖ್ ಅಂಕಲ್ ಅಥವಾ ನಳಿನಿ ಆಂಟಿಯಿಂದ ಈ ಬಗ್ಗೆ ಯಾವುದೇ ಪ್ರಶ್ನೆಗಳು ನೋಟಗಳು ನನ್ನನ್ನು ಎದುರುಗೊಂಡಿಲ್ಲವಾದ್ದರಿಂದ ವಸಂತ್ ವಿಷಯ ಅವರ ಕಿವಿ ಮುಟ್ಟಲಿಲ್ಲವೆನ್ನುವ ಸಮಾಧಾನ ನನಗಿತ್ತು.
ಜೂನ್ ಹನ್ನೆರಡರ ಬೆಳಗ್ಗೆ ನೇಹಾ ಫೋನ್ ಮಾಡಿ ಆದಷ್ಟು ಬೇಗ ಬಾರೆಂದು ಕರೆದಾಗ ಅವಳ ಸ್ವರದಲ್ಲಿ ಯಾವುದೇ ಆತಂಕವಿಲ್ಲದಿದ್ದರೂ ನನ್ನ ಎದೆಬಡಿತ ಮಾತ್ರ ತಾಳ ತಪ್ಪಿ ಏರುಪೇರಾಯ್ತು. ಅವಸರವಸರವಾಗಿ ಹೇಗ್ಹೇಗೋ ತಯಾರಾಗಿ ಅವರ ಮನೆಯ ಮುಂದೆ ಬಂದಾಗ ಜಾಜಿ ಮಂಟಪದಲ್ಲೇ ಐದಾರು ಜನ ನಿಂತಿದ್ದರು. ಗೇಟಿನಿಂದ ಹೆಜ್ಜೆ ಮುಂದೆ ಎತ್ತಿಡುವುದೇ ಕಷ್ಟವೆನಿಸಿ ಅಲ್ಲೇ ನಿಂತೆ, ಜಾಜಿ ಮಂಟಪ ದಿಟ್ಟಿಸುತ್ತಾ.
ಶ್ರಿಯಾಲಂಕಾರ್- ನಮ್ಮೂರಿನ ದೊಡ್ಡ ಬಟ್ಟೆಯಂಗಡಿ. ಎಷ್ಟೋ ಕಾಲದಿಂದಲೂ ಇದ್ದ ಈ ಅಂಗಡಿಯಲ್ಲೇ ಸರೋಜಾ ಆಂಟಿ, ನಳಿನಿ ಆಂಟಿ, ಸುಮುಖ್ ಅಂಕಲ್ ಯಾವಾಗಲೂ ವ್ಯವಹಾರ ಮಾಡುತ್ತಿದ್ದ ಕಾರಣ ನಮಗೆಲ್ಲ ಭಾರೀ ಸ್ವಾಗತವೇ ಸಿಕ್ಕಿತು. ಹರ್ಷಣ್ಣ ಮತ್ತು ಸುಮುಖ್ ಅಂಕಲ್ ಜೊತೆಯಲ್ಲಿ ನಾವೈದು ಹೆಂಗಸರು. ಅಂಗಡಿ ತುಂಬಾ ನಮ್ಮದೇ ಗೌಜಿ-ಗಲಾಟೆ. ಎಲ್ಲರಿಗೂ ಪರಿಚಯವಿರುವ ಉತ್ಸಾಹ ಸಲುಗೆ ಮಾತುಕತೆಯಲ್ಲಿ ಎದ್ದು ಕಾಣುತ್ತಿತ್ತು. ಅಂಗಡಿ ಮಾಲೀಕ ಸ್ವತಃ ನಮ್ಮ ಮುಂದೆ ನಿಂತಿದ್ದರು, ಸೀರೆಗಳನ್ನು ಬಿಡಿಸಿ ತೋರಿಸಿ ವೈವಿಧ್ಯ ವೈಶಿಷ್ಠ್ಯಗಳನ್ನು ವಿವರಿಸಲು.
ನೇಹಾ ತನಗಾಗಿ ಮೂರು-ನಾಲ್ಕು ಸೀರೆಗಳನ್ನು ಆರಿಸಿಕೊಳ್ಳಬೇಕಾಗಿತ್ತು. ಅವಳಿಗೆ ಮೆಚ್ಚಾದದ್ದು ಅಂಕಲ್ ಮತ್ತು ಹರ್ಷಣ್ಣನನ್ನು ಪೆಚ್ಚಾಗಿಸುತ್ತಿತ್ತು. ಅವರ ಇಷ್ಟ ಇವಳಿಗೆ ಕಷ್ಟವಾಗುತ್ತಿತ್ತು. ಇದೇ ಜಟಾಪಟಿ ನಡೀತಿರುವಾಗ ಅಮ್ಮ ಮತ್ತು ನಳಿನಿ ಆಂಟಿ ತಮ್ಮ ತಮ್ಮ ಕಣ್ಣು ಒಪ್ಪಿದ ಸೀರೆಗಳನ್ನು ಹೆಕ್ಕಿಕೊಂಡು ಸರೋಜ ಆಂಟಿಯ ಸಹಾಯಕ್ಕೆ ನಿಂತಿದ್ದರು. ನಾವಿಬ್ಬರೂ ಸೀರೆಗಳ ಅಟ್ಟಿಗಳ ನಡುವೆ ತಲೆಕೆರೆಯುತ್ತಾ ಪಿಳಿಪಿಳಿ ಮಾಡುತ್ತಾ ಕೂತಿದ್ದಾಗ ಅಂಕಲ್ ಮತ್ತು ಹರ್ಷಣ್ಣ ಒಟ್ಟಾಗಿ ನಾಲ್ಕು ಸೀರೆಗಳನ್ನು ತಂದು ನಮ್ಮ ಮುಂದೆ ಇಟ್ಟರು.
‘ನೇಹಾ, ಇದು ನಿಶ್ಚಿತಾರ್ಥಕ್ಕೆ, ಇದು ಧಾರೆಗೆ, ಇದು ಔತಣಕ್ಕೆ, ಇದು ಶಿಶಿರನಿಗೆ...’ ಅಂಕಲ್ ಕೊನೆಯ ಮಾತೆಂಬಂತೆ ಹೇಳಿದಾಗ ಅವರ ಆಯ್ಕೆಗಳನ್ನು ಮರುಮಾತಿಲ್ಲದೆ ನೇವರಿಸಿದೆವು.
‘ಇಷ್ಟು ಹೊತ್ತು ಈ ಸೀರೆಗಳು ಎಲ್ಲಿ ಅಡಗಿದ್ದವು? ಇವುಗಳನ್ನು ನಮಗೆ ಯಾಕೆ ತೋರಿಸ್ಲಿಲ್ಲ ನೀವು?’ ನೇಹಾ ಅಂಗಡಿ ಹುಡುಗರನ್ನೇ ತರಾಟೆಗೆಳೆದಳು. ಅವರೆಲ್ಲ ಸುಮ್ಮನೇ ಮುಖಮುಖ ನೋಡುವಾಗ, ‘ಇಷ್ಟ ಆಗದಿದ್ರೆ ಬದಲಾಯಿಸುವಾ. ಒತ್ತಾಯ ಏನಿಲ್ಲ’ ಎಂದ ಹರ್ಷಣ್ಣ. ನೇಹಾ ಸುಮ್ಮನೇ ತಲೆಯಾಡಿಸಿ ಸೀರೆಗಳನ್ನು ಮಡಿಲಲ್ಲಿರಿಸಿಕೊಂಡಾಗ, ‘ಬಿಲ್ ಮಾಡಿ ಪ್ಯಾಕ್ ಮಾಡಿ ಕೊಡ್ತೇವಮ್ಮಾ, ಇಲ್ಲಿ ಕೊಡಿ’ ಅಂತ ಕೈ ನೀಡಿದರು ಅಂಗಡಿ ಯಜಮಾನರು. ಕೆನ್ನೆಗಳು ಇನ್ನಷ್ಟು ಕೆಂಪಾದವು.
ಜೂನ್ ಮೂವತ್ತರಂದು ಮದುವೆಯೆಂದು ನಿಶ್ಚಯವಾಯ್ತು. ಔಪಚಾರಿಕವಾಗಿ ನಿಶ್ಚಿತಾರ್ಥವೂ ನಡೆಯಿತು. ಇವೆಲ್ಲದರ ನಡುವೆ ಅಮ್ಮನ ವಿರೋಧವನ್ನೂ ಲೆಕ್ಕಿಸದೆ ಎಮ್.ಎಸ್ಸಿ.ಗೆ ಅರ್ಜಿ ಹಾಕಿದೆ. ಜುಲೈ ಹದಿನೆಂಟರಂದು ವಿ.ವಿ. ಕ್ಯಾಂಪಸ್ಸಿನಲ್ಲಿ ಹಾಜರಾಗಬೇಕೆನ್ನುವ ಆಜ್ಞಾಪತ್ರವೂ ಬಂತು. ಅಮ್ಮನ ರಾಗ ಏರುತ್ತಿತ್ತು. ನೇಹಾಳ ಮದುವೆ ನೆಪದಲ್ಲಿ ಹೆಚ್ಚಾಗಿ ಅಲ್ಲೇ ಇರುವ ಅವಕಾಶ ಹುಡುಕುತ್ತಿದ್ದೆ ನಾನು. ನಮ್ಮ ಮಾತಿನ ನಡುವೆ ಆಗೊಮ್ಮೆ ಈಗೊಮ್ಮೆ ವಸಂತ್ ನುಸುಳುತ್ತಿದ್ದ. ಬಲವಂತವಾಗಿ ನೇಹಾಳ ಬಾಯಿ ಮುಚ್ಚಿಸುವುದಾಗಿತ್ತು. ಸುಮುಖ್ ಅಂಕಲ್ ಅಥವಾ ನಳಿನಿ ಆಂಟಿಯಿಂದ ಈ ಬಗ್ಗೆ ಯಾವುದೇ ಪ್ರಶ್ನೆಗಳು ನೋಟಗಳು ನನ್ನನ್ನು ಎದುರುಗೊಂಡಿಲ್ಲವಾದ್ದರಿಂದ ವಸಂತ್ ವಿಷಯ ಅವರ ಕಿವಿ ಮುಟ್ಟಲಿಲ್ಲವೆನ್ನುವ ಸಮಾಧಾನ ನನಗಿತ್ತು.
ಜೂನ್ ಹನ್ನೆರಡರ ಬೆಳಗ್ಗೆ ನೇಹಾ ಫೋನ್ ಮಾಡಿ ಆದಷ್ಟು ಬೇಗ ಬಾರೆಂದು ಕರೆದಾಗ ಅವಳ ಸ್ವರದಲ್ಲಿ ಯಾವುದೇ ಆತಂಕವಿಲ್ಲದಿದ್ದರೂ ನನ್ನ ಎದೆಬಡಿತ ಮಾತ್ರ ತಾಳ ತಪ್ಪಿ ಏರುಪೇರಾಯ್ತು. ಅವಸರವಸರವಾಗಿ ಹೇಗ್ಹೇಗೋ ತಯಾರಾಗಿ ಅವರ ಮನೆಯ ಮುಂದೆ ಬಂದಾಗ ಜಾಜಿ ಮಂಟಪದಲ್ಲೇ ಐದಾರು ಜನ ನಿಂತಿದ್ದರು. ಗೇಟಿನಿಂದ ಹೆಜ್ಜೆ ಮುಂದೆ ಎತ್ತಿಡುವುದೇ ಕಷ್ಟವೆನಿಸಿ ಅಲ್ಲೇ ನಿಂತೆ, ಜಾಜಿ ಮಂಟಪ ದಿಟ್ಟಿಸುತ್ತಾ.
Labels:
ಕಥನಕಾರಣ,
ತುಂಟ-ತುಡುಗ-ತರಲೆ-ಮನ,
ನೀಳ್ಗತೆ,
ಹೀಗೇ ಸಾಗಲಿ
Subscribe to:
Posts (Atom)