"ಮೇಡಮ್, ನಿಮ್ಮತ್ರ ಅರ್ಜೆಂಟ್ ಮಾತಾಡ್ಬೇಕು. ಪುರುಸೊತ್ತು ಉಂಟಾ? ಕಾಲ್ ಮಾಡ್ಲಾ?"
ಅವನ ಮೆಸೇಜ್ ಬಂದಾಗ ಮಧ್ಯಾಹ್ನದ ಊಟ, ನಂತರದ ಕೆಲಸಗಳನ್ನು ಮುಗಿಸಿ ಮಲಗಲೋ ಓದಲೋ ಅನ್ನುವ ಗೊಂದಲದಲ್ಲಿದ್ದೆ. ಎರಡನ್ನೂ ಬದಿಗಿಟ್ಟು "ಕಾಲ್ ಮಾಡು" ಉತ್ತರ ಕಳಿಸಿದೆ.
ಅವನು ನನ್ನ ಕ್ಲಯಂಟ್. ಇದಕ್ಕೆ ಮೊದಲು ಎರಡು ಬಾರಿ ಸಮ್ಮೋಹನ ಚಿಕಿತ್ಸೆಗಾಗಿ ಬಂದಿದ್ದ. ಎರಡೂ ಸಲವೂ ಹದವಾದ ಟ್ರಾನ್ಸ್ ಸ್ಟೇಜ್ ತಲುಪಿದ್ದ. ರಿಲ್ಯಾಕ್ಸ್ ಆಗುವುದಕ್ಕೇ ಹಿಂಜರಿಕೆ ಆತನಿಗೆ. ಏನೋ ಬಿಗು, ಎಂಥದೋ ಆತಂಕ. ಮೂರನೇ ವಾರಕ್ಕೆ ಭೇಟಿ ನಿಗದಿಪಡಿಸಿಯೇ ಹೋಗಿದ್ದ. ಇನ್ನೆರಡು ದಿನಕ್ಕೆ ನಮ್ಮ ನಿಗದಿತ ಭೇಟಿ. ಇಂದೇನು ಅರ್ಜೆಂಟ್? ನನ್ನ ಯೋಚನಾ ಸರಣಿ ಅವನ ಕರೆಯಿಂದ ಕತ್ತರಿಸಲ್ಪಟ್ಟಿತು.
"ಹಲೋ, ನಮಸ್ತೆ ಸುಂದರ್. ಹೇಳಿ. ಹೇಗಿದ್ದೀರಿ?"
"ನಾನು... ನಾನು... ತುಂಬಾ ಟೆನ್ಶನ್ ಆಗ್ತದೆ ಮೇಡಮ್. ನಿದ್ದೆಯೇ ಬರುದಿಲ್ಲ. ರಾತ್ರೆ ಎರಡು ಮೂರು ಗಂಟೆಗೆಲ್ಲ ಕಾರ್ ತಗೊಂಡು ಡ್ರೈವ್ ಹೋಗ್ತೇನೆ, ಟೆನ್ಶನ್ ತಡಿಲಿಕ್ಕೆ. ಆದ್ರೂ ಸರಿಯಾಗುದಿಲ್ಲ. ನಿದ್ದೆಯೇ ಬರುದಿಲ್ಲ. ಟೆನ್ಶನ್... ನಾನು ಸರಿಯಾಗ್ತೆನಾ ಮೇಡಮ್?"
"ಸುಂದರ್, ನೀವು ಖಂಡಿತಾ ಸರಿಯಾಗ್ತೀರಿ. ನಾನು ಹೇಳಿದ ಹಾಗೆ ಕೇಳ್ಬೇಕು, ಅಷ್ಟೇ. ಕೇಳ್ತೀರಾ?"
"ಹ್ಮ್..."
"ನಾನು ಹೇಳಿದ ಹಾಗೆ ಪ್ರತಿದಿನ ರಿಲ್ಯಾಕ್ಸೇಷನ್ ಅಭ್ಯಾಸ ಮಾಡ್ತಿದ್ದೀರಾ? ಬೆಳಗ್ಗೆ ಮೆಡಿಟೇಶನ್ ಮಾಡ್ತಿದ್ದೀರ? ಯೋಗಾಬ್ಯಾಸ ಪುನಃ ಶುರು ಮಾಡಿದ್ದೀರಾ?"
"ಇಲ್ಲ ಮೇಡಮ್, ಯಾವುದೂ ಆಗುದಿಲ್ಲ. ಸುಮ್ಮನೇ ಕೂತ್ಕೊಳ್ಳಿಕ್ಕೇ ಆಗುದಿಲ್ಲ. ಟೆನ್ಶನ್..."
"ನಿಮ್ಮ ಇಷ್ಟದ ಮ್ಯೂಸಿಕ್... ಅದನ್ನು ಕೇಳ್ತಿದ್ದೀರ?"
"ಹೌದು, ಅದು ಯಾವಾಗ್ಲೂ ಕೇಳ್ತೇನೆ."
"ಗುಡ್. ಅದನ್ನೇ ಕೇಳಿಕೊಂಡು ಹಾಗೇ ಕಣ್ಣುಮುಚ್ಚಿ ರಿಲ್ಯಾಕ್ಸ್ ಆಗಿ. ಇನ್ನೆರಡು ದಿನ ಅದನ್ನು ಮಾಡ್ತೀರಾ?"
"ಹ್ಮ್, ಮಾಡ್ತೇನೆ ಮೇಡಮ್..."
"ಸರಿ ಹಾಗಾದ್ರೆ. ಎರಡು ದಿನದ ಮೇಲೆ ನೋಡುವಾ. ನಿಮ್ಮ ಸಮಯಕ್ಕೆ ಸರಿಯಾಗಿ ಬನ್ನಿ, ಆಯ್ತಾ?"
"ಬರ್ತೇನೆ ಮೇಡಮ್. ನಾನು ಸರಿಯಾಗ್ತೇನಾ?"
"ಹೌದು, ಸುಂದರ್. ಖಂಡಿತಾ ಸರಿಯಾಗ್ತೀರಿ. ಗುರುವಾರ ನೋಡುವಾ. ಬೈ ಬೈ. ಟೇಕ್ ಕೇರ್."
"ಹ್ಮ್..."
***
ಸುಂದರ್ ಹೆಸರು ಅನ್ವರ್ಥ. ಸ್ಫುರದ್ರೂಪಿ ತರುಣ. ಇಪ್ಪತ್ತಾರರ ಹರೆಯ. ಎತ್ತರದ ದೃಢಕಾಯ. ಗುಂಗುರುಂಗುರು ತಲೆಗೂದಲು. ಅಗಲ ಮುಖದಲ್ಲಿ ಕಳೆಗುಂದಿದ ಕಂಗಾಲಾದ ಅಗಲಗಲ ಕಣ್ಣುಗಳು. ಬೇಕಾದಷ್ಟು ಆಸ್ತಿ ಮಾಡಿಟ್ಟಿರುವ ಸಿವಿಲ್ ಕಾಂಟ್ರ್ಯಾಕ್ಟರ್ ಅಪ್ಪನ ಏಕಮಾತ್ರಪುತ್ರ. ಬಿ.ಕಾಂ. ಪದವೀಧರ. ಸಿ.ಎ. ಮಾಡುವ ಕನಸು ಹೊತ್ತಾಗಲೇ ಕಣ್ಣಿಗೆ ಬಿದ್ದವಳು ದೊಡ್ಡಪ್ಪನ ಮಗನ ಹೆಂಡತಿ- ಸುಜೇತಾ. ಚಿಕ್ಕಪ್ಪನ ಜೊತೆಗೇ ಕಟ್ಟಡ ಕಾಮಗಾರಿ ಕೆಲಸಗಳ ಉಸ್ತುವಾರಿ ನೋಡಿಕೊಂಡು ತನ್ನ ನೆಲೆ ಕಂಡುಕೊಳ್ಳುವ ಪ್ರಯತ್ನದಲ್ಲಿದ್ದ ಭಾಸ್ಕರ್ ಇವರ ಮನೆಗೇ ಬಂದು ನೆಲೆಸಿದ ಪತ್ನೀಸಹಿತ.
ಸುಂದರನ ಅಪ್ಪ ಶಂಕರ್ ನಗರದಲ್ಲೆಲ್ಲ ಸುಪ್ರಸಿದ್ಧರು. ಕೈತುಂಬಾ ಕೆಲಸವಿದ್ದು ಎಲ್ಲವನ್ನೂ ಸರಿದೂಗಿಸಿಕೊಳ್ಳಲು ಹೆಣಗುತ್ತಿದ್ದ ಹೊತ್ತಿನಲ್ಲೇ ಭಾಸ್ಕರ್ ಜೊತೆಗೂಡಿದಾಗ ರೆಕ್ಕೆ ಬಂದಂತಾಗಿತ್ತು. ಅಣ್ಣನ ಮಗನನ್ನೂ ಮನೆಯಲ್ಲೇ ಇರಿಸಿಕೊಂಡು ಕೆಲಸ ಕಾರ್ಯಗಳ ರಾಜ್ಯಭಾರವನ್ನು ಅವನಿಗೂ ಕಲಿಸುತ್ತಾ ತಾವು ಬೆಳೆಯುವ ಲೆಕ್ಕ ಹಾಕಿದರು. ಮನೆಯಾಕೆಗೂ ಮಗಳಂತಹ ಸೊಸೆ ಸುಜೇತಾಳಲ್ಲಿ ಮಮತೆಯೇ. ಎಲ್ಲವೂ ಚಂದವಾಗಿಯೇ ಇತ್ತು- ಅದೊಂದು ದಿನ ರಾತ್ರೆ ಆ ಕೋಣೆಯ ಬಾಗಿಲು ಟಕಟಕಿಸುವ ತನಕ.
ಇನ್ನೊಂದು ಅಕ್ಷರಂಗಳ
"ಸುಪ್ತದೀಪ್ತಿ"ಯ ಕಿಟಕಿ->->->
Monday, 9 May 2011
Monday, 2 May 2011
ಸುಮ್ಮನೆ ನೋಡಿದಾಗ...೨೪
‘ನೀವು ನನ್ನನ್ನು ಇಷ್ಟ ಪಟ್ಟಿದ್ದೀರಿ ಅಂತ ನೇಹಾ ಹೇಳಿದ್ದಾಳೆ ಅಂತಂದ ಹರ್ಷ. ನಿಜವಾ?’
‘...’
‘ನಿಮ್ಮನ್ನು ನೋಡಿದ ಮೊದಲ ಸಲವೇ ನಾನು ಮೆಚ್ಚಿಕೊಂಡಿದ್ದೆ ನಿಮ್ಮನ್ನು. ನನ್ನ ಕಸಿನ್ ಶರತ್ ನಿಮ್ಮ ಕ್ಲಾಸ್ಮೇಟ್ ಅಲ್ವಾ? ಶರತ್ ಹೇಳ್ತಿದ್ದ ನೀವು ಎಂ.ಎಸ್ಸಿ. ಮಾಡುವ ಯೋಚನೆಯಲ್ಲಿದ್ದೀರಿ ಅಂತ. ಹೌದಾ?’
‘ಹ್ಮ್! ಜುಲೈ ಹದ್ನೆಂಟು ಕ್ಯಾಂಪಸ್ಸಿಗೆ ಹೋಗ್ತಿದ್ದೇನೆ.’ ಅಂತೂ ಒಂದು ಅರ್ಥಪೂರ್ಣ ವಾಕ್ಯ ಮಾತಾಡಿದೆ!
‘ಯಾವ ವಿಷಯದಲ್ಲಿ ಎಂ.ಎಸ್ಸಿ?’
‘ಪ್ರಾಣಿಶಾಸ್ತ್ರ ವಿಭಾಗದಲ್ಲಿ. ಕೆಮಿಸ್ಟ್ರಿ ನಂಗಿಷ್ಟ ಇಲ್ಲ...’ ಬೇಕಂತಲೇ ಎರಡನೆಯ ಮಾತು ಸೇರಿಸಿದ್ದೆ.
‘ನಿಮ್ ಇಷ್ಟ ನಿಮ್ಮದೇ. ಅದ್ರಲ್ಲೇನು ತೊಂದರೆ?’
‘...’
ಸಣ್ಣದೊಂದು ಮಿಂಚು ಸುಳಿದು ಗುಡುಗು ಮೊಳಗಿ ಮಳೆಹನಿ ಇಳಿಯತೊಡಗಿದ್ದೇ ನೆಪವಾಗಿ ಆಕಾಶ ನೋಡಿದೆ.
‘ಮನೆಒಳಗೆ ಹೋಗುವ, ಬನ್ನಿ...’ ತಾನೇ ಮುಂದಾಗಿ ಹೊರಟವನ ಹಿಂದೆ ಎದ್ದು ನಿಂತಾಗ ಅಂಗಳದಲ್ಲಿ ನಿಂತಿದ್ದ ನೀರಿನಲ್ಲಿ ಮತ್ತೊಂದು ಸುಳಿಮಿಂಚು ಪ್ರತಿಫಲಿಸಿತು. ಗುಡುಗಿನ ಸ್ವರದೊಡನೆಯೇ ಗುಡುಗುಡು ಓಡಿ ನೇಹಾಳ ಕೋಣೆಯನ್ನು ಸೇರಿಕೊಂಡು ಬಾಗಿಲು ಮುಂದೆ ಮಾಡಿ ಅವಳೆರಡೂ ಕೆನ್ನೆಗಳನ್ನು ಹಿಂಡುತ್ತಾ ಕೇಳಿದೆ, ‘ಯಾಕೆ ಇದೆಲ್ಲಾ ಕಿತಾಪತಿ ಮಾಡಿದ್ದು? ಯಾಕೆ ಹರ್ಷಣ್ಣನಿಗೆ ಹೇಳಿದ್ದು? ಮತ್ತಿನ್ಯಾರಿಗೆಲ್ಲ ಗೊತ್ತುಂಟು ಈ ವಿಷ್ಯ? ಯಾಕೆ?’
‘ಹೇಳದೇ ಇದ್ದಿದ್ರೆ ನಿನ್ನ ಪ್ರೀತಿ ನಿನ್ನ ಹೃದಯದಲ್ಲೇ ಹುದುಗಿ ಒಣಗಿ ಹೋಗ್ತಿತ್ತೇನೋ... ಅದಕ್ಕೇ ಹರ್ಷನಿಗೆ ಹೇಳಿದ್ದು. ಅವ್ರಿಗಂತೂ ಖಷಿಯೋ ಖುಷಿ. ‘ತುಂಬಾ ಒಳ್ಳೇ ಹುಡುಗ ವಸಂತ್. ಅವ್ನನ್ನು ಮೆಚ್ಚಿದ್ದಾಳಾ ಶಿಶಿರಾ? ನನ್ ತಂಗಿ ಆಯ್ಕೆ ಪರ್ಫ಼ೆಕ್ಟ್, ನನ್ನ ಆಯ್ಕೆ ಹಾಗೇ...’ ಅಂತೆಲ್ಲಾ ಹಾರಾಡಿದ್ದೇ ಹಾರಾಡಿದ್ದು. ನಿನ್ನೆ ಸಂಜೆ ಅವ್ರು ಬಂದಾಗ ಹೇಳಿದೆ. ಇವತ್ತು ಈ ಕತೆ. ಇದೆಲ್ಲ ನಂಗೇನೂ ಗೊತ್ತಿರ್ಲಿಲ್ಲ ಮಾರಾಯ್ತಿ. ಎಲ್ಲ ಅವ್ರದ್ದೇ ಕಿತಾಪತಿ. ಅವ್ರನ್ನೆಲ್ಲ ಇಲ್ಲಿಗೆ ನಮ್ಮನೆಗೆ ಅಂತ ಕರ್ಕೊಂಬಂದು, ಮೆಲ್ಲ ಪಪ್ಪನತ್ರ ಹೇಳಿ, ನನ್ನ ಮೂಲಕ ನಿಂಗೆ ಫ಼ೋನ್ ಮಾಡ್ಸಿದ್ದಾರೆ. ಆಮೇಲಿದ್ದು ನಿಂಗೇ ಗೊತ್ತುಂಟಲ್ಲಾ. ನನ್ನನ್ನು ಆಟ ಆಡ್ಸಿದ್ರು ಪಪ್ಪ, ಹರ್ಷ ಸೇರಿ. ಪ್ಲೀಸ್ ಮಾರಾಯ್ತಿ, ನಂಬು ನನ್ನನ್ನು...’ ನನ್ನ ಪ್ರಶ್ನಾರ್ಥಕ ನೋಟಕ್ಕೆ ಉತ್ತರ ಕೊಡುತ್ತಾ ನಿಂತವಳ ಕೆನ್ನೆಗಳೂ ಕೆಂಪಾಗಿದ್ದವು.
ನಮ್ಮಿಬ್ಬರ ಮೌನಹರಟೆಯ ನಡುವೆ ನಡುಮನೆಯಿಂದ ಅಂಕಲ್ ಅಮ್ಮನಿಗೆ ಫೋನ್ ಮಾಡುತ್ತಿದ್ದದ್ದು ಕೇಳುತ್ತಿತ್ತು. ಮಧ್ಯಾಹ್ನದೂಟಕ್ಕೆ ಇಲ್ಲೇ ಬರುವಂತೆ ಹೇಳುತ್ತಿದ್ದರು ಅಂಕಲ್. ‘ಏನೋ ವಿಶೇಷ ಉಂಟು. ಬನ್ನಿ, ಗೊತ್ತಾಗ್ತದೆ’ ಅನ್ನುತ್ತಿದ್ದರು. ಅಲ್ಲಿಂದೇನು ಉತ್ತರ ಬಂತೋ ಗೊತ್ತಿಲ್ಲ.
ಕೋಣೆಯ ಬಾಗಿಲ ಮೇಲೆ ಎಂದಿನ ಹಾಗೆ ಬೆರಳುಗಳ ನರ್ತನ ಶುರುವಾದಾಗ ಬಾಗಿಲು ತೆರೆದೆವು. ಒಳಗೆ ಬಂದ ಅಂಕಲ್ ನಮ್ಮಿಬ್ಬರನ್ನೂ ತಬ್ಬಿಕೊಂಡು ಸುಮ್ಮನೇ ನಿಂತರು. ಅವರ ಎರಡೂ ಭುಜಗಳಲ್ಲಿ ಒಂದೊಂದು ಹೂಗಳು; ಆಗಷ್ಟೇ ಸುರಿದ ಮಳೆಯಲ್ಲಿ ಮಿಂದಂತೆ ಪುಳಕಿತ ಹೂಗಳು. ಮತ್ತೊಂದು ಮಿಂಚು ಬೆಳಗಿತೆಂದು ತಲೆಯೆತ್ತಿದಾಗ ಕಂಡದ್ದು ಕ್ಯಾಮೆರಾ ಹಿಂದೆ ನಗುತ್ತಿದ್ದ ಹರ್ಷಣ್ಣ. ಅವನ ಹಿಂದೆ ಕಾತರದ ಕಣ್ಣುಗಳ ವಸಂತ್. ಅವನಿಗಿನ್ನೂ ನನ್ನ ಉತ್ತರ ಕೊಟ್ಟಿರಲಿಲ್ಲ. ಕೊಡಬೇಕೇ? ಯಾಕೆ? ನಾಲಿಗೆ ಚಾಚಿ ಹರ್ಷಣ್ಣನನ್ನು ಅಣಕಿಸಿ ಅಂಕಲ್ ತೋಳಿಗೆ ಕೆನ್ನೆಯೊತ್ತಿದೆ. ಅಡುಗೆಮನೆಯಿಂದ ನಳಿನಿ ಆಂಟಿ ತುಪ್ಪದಲ್ಲಿ ದ್ರಾಕ್ಷಿ ಗೇರುಬೀಜ ಹುರಿಯುತ್ತಿದ್ದ ಘಮ ಮನೆಯೆಲ್ಲ ತುಂಬಿಕೊಂಡಿತು, ಮನವನ್ನೂ.
{ಸಹೃದಯ ಓದುಗರೇ, ನಿಮ್ಮೆಲ್ಲರ ಆಶೀರ್ವಾದ ಕೋರುತ್ತಾ, ನೇಹಾ-ಹರ್ಷ, ಶಿಶಿರಾ-ವಸಂತ್ ನಿಮ್ಮನ್ನು ಬೀಳ್ಕೊಡುತ್ತಾರೆ. ಹರಸಿರಿ.}
‘...’
‘ನಿಮ್ಮನ್ನು ನೋಡಿದ ಮೊದಲ ಸಲವೇ ನಾನು ಮೆಚ್ಚಿಕೊಂಡಿದ್ದೆ ನಿಮ್ಮನ್ನು. ನನ್ನ ಕಸಿನ್ ಶರತ್ ನಿಮ್ಮ ಕ್ಲಾಸ್ಮೇಟ್ ಅಲ್ವಾ? ಶರತ್ ಹೇಳ್ತಿದ್ದ ನೀವು ಎಂ.ಎಸ್ಸಿ. ಮಾಡುವ ಯೋಚನೆಯಲ್ಲಿದ್ದೀರಿ ಅಂತ. ಹೌದಾ?’
‘ಹ್ಮ್! ಜುಲೈ ಹದ್ನೆಂಟು ಕ್ಯಾಂಪಸ್ಸಿಗೆ ಹೋಗ್ತಿದ್ದೇನೆ.’ ಅಂತೂ ಒಂದು ಅರ್ಥಪೂರ್ಣ ವಾಕ್ಯ ಮಾತಾಡಿದೆ!
‘ಯಾವ ವಿಷಯದಲ್ಲಿ ಎಂ.ಎಸ್ಸಿ?’
‘ಪ್ರಾಣಿಶಾಸ್ತ್ರ ವಿಭಾಗದಲ್ಲಿ. ಕೆಮಿಸ್ಟ್ರಿ ನಂಗಿಷ್ಟ ಇಲ್ಲ...’ ಬೇಕಂತಲೇ ಎರಡನೆಯ ಮಾತು ಸೇರಿಸಿದ್ದೆ.
‘ನಿಮ್ ಇಷ್ಟ ನಿಮ್ಮದೇ. ಅದ್ರಲ್ಲೇನು ತೊಂದರೆ?’
‘...’
ಸಣ್ಣದೊಂದು ಮಿಂಚು ಸುಳಿದು ಗುಡುಗು ಮೊಳಗಿ ಮಳೆಹನಿ ಇಳಿಯತೊಡಗಿದ್ದೇ ನೆಪವಾಗಿ ಆಕಾಶ ನೋಡಿದೆ.
‘ಮನೆಒಳಗೆ ಹೋಗುವ, ಬನ್ನಿ...’ ತಾನೇ ಮುಂದಾಗಿ ಹೊರಟವನ ಹಿಂದೆ ಎದ್ದು ನಿಂತಾಗ ಅಂಗಳದಲ್ಲಿ ನಿಂತಿದ್ದ ನೀರಿನಲ್ಲಿ ಮತ್ತೊಂದು ಸುಳಿಮಿಂಚು ಪ್ರತಿಫಲಿಸಿತು. ಗುಡುಗಿನ ಸ್ವರದೊಡನೆಯೇ ಗುಡುಗುಡು ಓಡಿ ನೇಹಾಳ ಕೋಣೆಯನ್ನು ಸೇರಿಕೊಂಡು ಬಾಗಿಲು ಮುಂದೆ ಮಾಡಿ ಅವಳೆರಡೂ ಕೆನ್ನೆಗಳನ್ನು ಹಿಂಡುತ್ತಾ ಕೇಳಿದೆ, ‘ಯಾಕೆ ಇದೆಲ್ಲಾ ಕಿತಾಪತಿ ಮಾಡಿದ್ದು? ಯಾಕೆ ಹರ್ಷಣ್ಣನಿಗೆ ಹೇಳಿದ್ದು? ಮತ್ತಿನ್ಯಾರಿಗೆಲ್ಲ ಗೊತ್ತುಂಟು ಈ ವಿಷ್ಯ? ಯಾಕೆ?’
‘ಹೇಳದೇ ಇದ್ದಿದ್ರೆ ನಿನ್ನ ಪ್ರೀತಿ ನಿನ್ನ ಹೃದಯದಲ್ಲೇ ಹುದುಗಿ ಒಣಗಿ ಹೋಗ್ತಿತ್ತೇನೋ... ಅದಕ್ಕೇ ಹರ್ಷನಿಗೆ ಹೇಳಿದ್ದು. ಅವ್ರಿಗಂತೂ ಖಷಿಯೋ ಖುಷಿ. ‘ತುಂಬಾ ಒಳ್ಳೇ ಹುಡುಗ ವಸಂತ್. ಅವ್ನನ್ನು ಮೆಚ್ಚಿದ್ದಾಳಾ ಶಿಶಿರಾ? ನನ್ ತಂಗಿ ಆಯ್ಕೆ ಪರ್ಫ಼ೆಕ್ಟ್, ನನ್ನ ಆಯ್ಕೆ ಹಾಗೇ...’ ಅಂತೆಲ್ಲಾ ಹಾರಾಡಿದ್ದೇ ಹಾರಾಡಿದ್ದು. ನಿನ್ನೆ ಸಂಜೆ ಅವ್ರು ಬಂದಾಗ ಹೇಳಿದೆ. ಇವತ್ತು ಈ ಕತೆ. ಇದೆಲ್ಲ ನಂಗೇನೂ ಗೊತ್ತಿರ್ಲಿಲ್ಲ ಮಾರಾಯ್ತಿ. ಎಲ್ಲ ಅವ್ರದ್ದೇ ಕಿತಾಪತಿ. ಅವ್ರನ್ನೆಲ್ಲ ಇಲ್ಲಿಗೆ ನಮ್ಮನೆಗೆ ಅಂತ ಕರ್ಕೊಂಬಂದು, ಮೆಲ್ಲ ಪಪ್ಪನತ್ರ ಹೇಳಿ, ನನ್ನ ಮೂಲಕ ನಿಂಗೆ ಫ಼ೋನ್ ಮಾಡ್ಸಿದ್ದಾರೆ. ಆಮೇಲಿದ್ದು ನಿಂಗೇ ಗೊತ್ತುಂಟಲ್ಲಾ. ನನ್ನನ್ನು ಆಟ ಆಡ್ಸಿದ್ರು ಪಪ್ಪ, ಹರ್ಷ ಸೇರಿ. ಪ್ಲೀಸ್ ಮಾರಾಯ್ತಿ, ನಂಬು ನನ್ನನ್ನು...’ ನನ್ನ ಪ್ರಶ್ನಾರ್ಥಕ ನೋಟಕ್ಕೆ ಉತ್ತರ ಕೊಡುತ್ತಾ ನಿಂತವಳ ಕೆನ್ನೆಗಳೂ ಕೆಂಪಾಗಿದ್ದವು.
ನಮ್ಮಿಬ್ಬರ ಮೌನಹರಟೆಯ ನಡುವೆ ನಡುಮನೆಯಿಂದ ಅಂಕಲ್ ಅಮ್ಮನಿಗೆ ಫೋನ್ ಮಾಡುತ್ತಿದ್ದದ್ದು ಕೇಳುತ್ತಿತ್ತು. ಮಧ್ಯಾಹ್ನದೂಟಕ್ಕೆ ಇಲ್ಲೇ ಬರುವಂತೆ ಹೇಳುತ್ತಿದ್ದರು ಅಂಕಲ್. ‘ಏನೋ ವಿಶೇಷ ಉಂಟು. ಬನ್ನಿ, ಗೊತ್ತಾಗ್ತದೆ’ ಅನ್ನುತ್ತಿದ್ದರು. ಅಲ್ಲಿಂದೇನು ಉತ್ತರ ಬಂತೋ ಗೊತ್ತಿಲ್ಲ.
ಕೋಣೆಯ ಬಾಗಿಲ ಮೇಲೆ ಎಂದಿನ ಹಾಗೆ ಬೆರಳುಗಳ ನರ್ತನ ಶುರುವಾದಾಗ ಬಾಗಿಲು ತೆರೆದೆವು. ಒಳಗೆ ಬಂದ ಅಂಕಲ್ ನಮ್ಮಿಬ್ಬರನ್ನೂ ತಬ್ಬಿಕೊಂಡು ಸುಮ್ಮನೇ ನಿಂತರು. ಅವರ ಎರಡೂ ಭುಜಗಳಲ್ಲಿ ಒಂದೊಂದು ಹೂಗಳು; ಆಗಷ್ಟೇ ಸುರಿದ ಮಳೆಯಲ್ಲಿ ಮಿಂದಂತೆ ಪುಳಕಿತ ಹೂಗಳು. ಮತ್ತೊಂದು ಮಿಂಚು ಬೆಳಗಿತೆಂದು ತಲೆಯೆತ್ತಿದಾಗ ಕಂಡದ್ದು ಕ್ಯಾಮೆರಾ ಹಿಂದೆ ನಗುತ್ತಿದ್ದ ಹರ್ಷಣ್ಣ. ಅವನ ಹಿಂದೆ ಕಾತರದ ಕಣ್ಣುಗಳ ವಸಂತ್. ಅವನಿಗಿನ್ನೂ ನನ್ನ ಉತ್ತರ ಕೊಟ್ಟಿರಲಿಲ್ಲ. ಕೊಡಬೇಕೇ? ಯಾಕೆ? ನಾಲಿಗೆ ಚಾಚಿ ಹರ್ಷಣ್ಣನನ್ನು ಅಣಕಿಸಿ ಅಂಕಲ್ ತೋಳಿಗೆ ಕೆನ್ನೆಯೊತ್ತಿದೆ. ಅಡುಗೆಮನೆಯಿಂದ ನಳಿನಿ ಆಂಟಿ ತುಪ್ಪದಲ್ಲಿ ದ್ರಾಕ್ಷಿ ಗೇರುಬೀಜ ಹುರಿಯುತ್ತಿದ್ದ ಘಮ ಮನೆಯೆಲ್ಲ ತುಂಬಿಕೊಂಡಿತು, ಮನವನ್ನೂ.
***
{ಸಹೃದಯ ಓದುಗರೇ, ನಿಮ್ಮೆಲ್ಲರ ಆಶೀರ್ವಾದ ಕೋರುತ್ತಾ, ನೇಹಾ-ಹರ್ಷ, ಶಿಶಿರಾ-ವಸಂತ್ ನಿಮ್ಮನ್ನು ಬೀಳ್ಕೊಡುತ್ತಾರೆ. ಹರಸಿರಿ.}
Labels:
ಕಥನಕಾರಣ,
ತುಂಟ-ತುಡುಗ-ತರಲೆ-ಮನ,
ನೀಳ್ಗತೆ,
ರಮ್ಯಗಾನ...
Subscribe to:
Posts (Atom)