ಮನಸ್ಸು ಪತಂಗ
ಮನಸ್ಸು ಮರ್ಕಟ
ಮನಸ್ಸು ಕುದುರೆ
.... .... .... ....
ಇನ್ನೂ ಏನೇನೋ ಆಗಿರುವ
ಆಗುತ್ತಿರುವ ಈ ಮನವನ್ನು
ಹಿಡಿದೆಳೆದು
ಕಾಲುಕಟ್ಟಿ, ಅಡ್ಡಹಾಕಿ
ಮೂಗು ಚುಚ್ಚಿ, ದಾರ ಪೋಣಿಸಿ
ಗೊರಸಿಗೆ ಲಾಳ ಹೊಡೆದು
ಬೆನ್ನಿಗೆ ಜೀನು ಬಿಗಿದು
ಕಣ್ಣ ಬದಿಗೆ ಪಟ್ಟಿ ಏರಿಸಿ
ಕಡಿವಾಣ ಹಾಕಿ, ಚಾಟಿ ಹಿಡಿದು
ಸವಾರಿ ಹೊರಟರೆ
ಚೇತನ ಸರದಾರ;
ಇಲ್ಲದಿರೆ ನಿಸ್ಸಾರ.
(೩೧-ಆಗಸ್ಟ್-೨೦೦೬)
ಇನ್ನೊಂದು ಅಕ್ಷರಂಗಳ
"ಸುಪ್ತದೀಪ್ತಿ"ಯ ಕಿಟಕಿ->->->
Saturday, 25 July 2009
Saturday, 18 July 2009
ಅಂಗಳದಿಂದ....
ಅಲ್ಲಿಂದ ಬಂದಾಗ
ಇಲ್ಲುಳಿವ ಹಂಬಲವೆ
ಬಲವಾಗಿ ಬೇರೂರಿ ಹಸಿರಾಡಿತು;
ಹಸಿನೆರಳಿನಡಿಯಲ್ಲಿ
ಉಸಿರಾಡುತಿರುವಾಗ
ಪಿಸುದನಿಯ ತೆರದಲ್ಲಿ ನೆನಪಾಡಿತು.
ಗೆಳತಿ-ಗೆಳೆಯರ ನೆನಕೆ
ಬೆಳೆದು ಹಬ್ಬಿತು ಮನಕೆ
ಕಳೆದ ಒಡನಾಟವನು ಕಣಜ ಮಾಡಿ;
ಮರೆಯ ಒಳಗೊಂದು ಹುಳು
ಕೊರೆ-ಕೊರೆದು ದಾರಿಯನು
ಸರಾಗ ಸಾಗಿತು ಯೋಚನೆಯ ಗಾಡಿ.
ಚಲನ ಶೀಲವೆ ಜೀವ-
-ಬಲವಾದ ನೆಲದಲ್ಲಿ
ಕೆಲವಾರು ಬೇರುಗಳು ಊರಲಿಲ್ಲ;
ಕವನ-ಲೇಖನ ಬರೆವ,
ಜವನ ರಂಗಕೆ ತರುವ,
ನವರಸಭರಿತರಿಗೆ ಕೊರತೆಯಿಲ್ಲ.
ಹಂಚಿಕೊಂಡಿಹ ನೆನಹು
ಅಂಚು ರಂಗಿನ ಪಟಲ,
ಚರ್ಚಿಸಿದ ಕ್ಷಣಗಳಿಗೆ ಲೆಕ್ಕವೆಲ್ಲಿ?
ಭಾಷೆ-ಬಂಧನ ನೆವನ,
ದೇಶವೊಂದರ ಸ್ಮರಣ,
ಭೂಷಣವು ಸ್ನೇಹ, ಸಹೃದಯರಲ್ಲಿ.
(೦೪-ಜುಲೈ-೨೦೦೩)
[ಹನ್ನೊಂದು ವರ್ಷಗಳ ಬಳಿಕ ಅಮೆರಿಕಾ ಬಿಟ್ಟು ಮಣಿಪಾಲಕ್ಕೆ ಹೋಗಿ ನೆಲೆಸಿದ್ದ ಸಂದರ್ಭದಲ್ಲಿ... ಎರಡು ವರ್ಷಗಳೊಳಗೇ ಮತ್ತೊಮ್ಮೆ ಅಮೆರಿಕದ ವಿಮಾನ ಹತ್ತಿದ್ದು ವಿಧಿ ಆಡಿಸಿದ ಆಟದಲ್ಲಿ]
ಇಲ್ಲುಳಿವ ಹಂಬಲವೆ
ಬಲವಾಗಿ ಬೇರೂರಿ ಹಸಿರಾಡಿತು;
ಹಸಿನೆರಳಿನಡಿಯಲ್ಲಿ
ಉಸಿರಾಡುತಿರುವಾಗ
ಪಿಸುದನಿಯ ತೆರದಲ್ಲಿ ನೆನಪಾಡಿತು.
ಗೆಳತಿ-ಗೆಳೆಯರ ನೆನಕೆ
ಬೆಳೆದು ಹಬ್ಬಿತು ಮನಕೆ
ಕಳೆದ ಒಡನಾಟವನು ಕಣಜ ಮಾಡಿ;
ಮರೆಯ ಒಳಗೊಂದು ಹುಳು
ಕೊರೆ-ಕೊರೆದು ದಾರಿಯನು
ಸರಾಗ ಸಾಗಿತು ಯೋಚನೆಯ ಗಾಡಿ.
ಚಲನ ಶೀಲವೆ ಜೀವ-
-ಬಲವಾದ ನೆಲದಲ್ಲಿ
ಕೆಲವಾರು ಬೇರುಗಳು ಊರಲಿಲ್ಲ;
ಕವನ-ಲೇಖನ ಬರೆವ,
ಜವನ ರಂಗಕೆ ತರುವ,
ನವರಸಭರಿತರಿಗೆ ಕೊರತೆಯಿಲ್ಲ.
ಹಂಚಿಕೊಂಡಿಹ ನೆನಹು
ಅಂಚು ರಂಗಿನ ಪಟಲ,
ಚರ್ಚಿಸಿದ ಕ್ಷಣಗಳಿಗೆ ಲೆಕ್ಕವೆಲ್ಲಿ?
ಭಾಷೆ-ಬಂಧನ ನೆವನ,
ದೇಶವೊಂದರ ಸ್ಮರಣ,
ಭೂಷಣವು ಸ್ನೇಹ, ಸಹೃದಯರಲ್ಲಿ.
(೦೪-ಜುಲೈ-೨೦೦೩)
[ಹನ್ನೊಂದು ವರ್ಷಗಳ ಬಳಿಕ ಅಮೆರಿಕಾ ಬಿಟ್ಟು ಮಣಿಪಾಲಕ್ಕೆ ಹೋಗಿ ನೆಲೆಸಿದ್ದ ಸಂದರ್ಭದಲ್ಲಿ... ಎರಡು ವರ್ಷಗಳೊಳಗೇ ಮತ್ತೊಮ್ಮೆ ಅಮೆರಿಕದ ವಿಮಾನ ಹತ್ತಿದ್ದು ವಿಧಿ ಆಡಿಸಿದ ಆಟದಲ್ಲಿ]
Labels:
'ಭಾವಗಾನ'ದಿಂದ-,
ಆತ್ಮ ಚಿಂತನ...,
ಕಥನಕಾರಣ,
ಹೀಗೇ ಸಾಗಲಿ
Subscribe to:
Posts (Atom)