ಅರುಣ ರವಿ ರಾಗಕ್ಕೆ ಹೊಳೆದು ನರ್ತಿಸುತಿದ್ದ
ಹುಲ್ಲಂಚ ಮಿಂಚನ್ನು ತೊರೆದೆವೇಕೆ?
ಪುಟಿ-ಪುಟಿದು ಏಳುತ್ತ ಆಗಸಕೆ ಹಾರುತ್ತ
ಅರಳಿ ಬೆಳೆಯುವ ಚಿಗುರ ಮರೆತೆವೇಕೆ?
ಹಾಲುಗಲ್ಲದ ಮೇಲೆ ಇಟ್ಟ ಬೆಟ್ಟನು ಸರಿಸಿ
ದಿಟ್ಟಿ ಸೋಕದ ಬೊಟ್ಟನಿಟ್ಟೆವೇಕೆ?
ಕೌತುಕವ ಸೋಜಿಗವ ಕಣ್ಣಂಚಿನಲೆ ಸವರಿ
ತುರಗ ಪಟ್ಟಿಯನಡ್ಡ ಕೊಟ್ಟೆವೇಕೆ?
ಬಿಂಬವಿಲ್ಲದ ಗುಡಿಗೆ ಮೂರ್ತತೆಯ ಸ್ವಾಗತಿಸಿ
ಅಷ್ಟಬಂಧಗಳಿಂದ ಬಿಗಿದೆವೇಕೆ?
ಸ್ತಂಭಗಳ ಅರಮನೆಯ ತುಂಬ ತುಂಬಿದೆ ಸರಕು
ಬಹಿರಂತರಂಗದಲಿ ಕೋಟೆಯೇಕೆ?
ಅನುದಿನವು ಸುಪ್ರಭೆಯ ಹೀರುವೆಲೆ ಹಸುರಂತೆ
ಕೂಸು-ಮನವಿರಲೆಮಗೆ ಮುಪ್ಪದೇಕೆ?
(೨೪-ಆಗಸ್ಟ್-೨೦೦೪)
ಇನ್ನೊಂದು ಅಕ್ಷರಂಗಳ
"ಸುಪ್ತದೀಪ್ತಿ"ಯ ಕಿಟಕಿ->->->
Friday, 18 September 2009
Saturday, 12 September 2009
ವಿಲಾಪ
ರಾಧೆ ರಾಧೇ ಎನದೆ ಅರೆಘಳಿಗೆಯೂ ಇರದೆ
ರಮಿಸಿ ಕಾಡಿದ ನನಗೆ ಏನಾಯಿತೋ
ರಾಧೆಯಾ ನೆರಳಿರದೆ ಗೆಜ್ಜೆಯಾ ದನಿಯಿರದೆ
ರಂಗಿನಾಟದ ಹುರುಪು ಹಾಳಾಯಿತೋ
ಕಿರಿಯನೆಂದೆಲ್ಲರೂ ಹಿರಿತನವನಾಡುತ್ತ
ಕೀಟಲೆಯನಾಡ್ಯಾಡಿ ಕೆಣಕುತಿರಲು
ಕಿನ್ನರಿಯ ಲೀಲೆಯಲಿ ಪ್ರೀತಿಯಲಿ ಕಾಯುತ್ತ
ಕಿಂಕಿಣಿಯನಾಡಿ ನೀ ಮನವ ಗೆಲಲು
ಹಾಲುಮೊಸರನು ಮೆಚ್ಚಿ ಬೆಣ್ಣೆಬೆಟ್ಟವನೆತ್ತಿ
ಹಸುಮಂದೆಯಲಿ ಕರುಗಳೊಡನಾಡುತ
ಹಾಲಾಹಲವ ಸುರಿವ ಹಾವ ಹೆಡೆಯನು ಮೆಟ್ಟಿ
ಹಾಡಿ ಆಡಿದ ನನ್ನ ಜೀವ ಗೆಣತಿ
ಮಾವ ಕರೆದನು ಎಂದು ಮನೆಯ ತೊರೆದೆನು ಅಂದು
ಮರೆಯುವೆನು ಹೇಗೆ ನಾ ಮನದಂಗಳ
ಮಾಳಿಗೆಯಲೇ ನಿಂದು ಪರದೆ ಹಿಂದೆಯೆ ನೊಂದು
ಮಾತು ಮರೆಸಿದೆ, ತುಳುಕಿಸದೆ ಕಂಗೊಳ
ಒಮ್ಮೆಯಾದರು ಬಂದು ನಿನ್ನ ಕಾಂಬೆನು ಎಂದು
ಒಂದಾಸೆ ಹೊತ್ತಿದ್ದೆ ಅರಮನೆಯಲಿ
ಒರಗುದಿಂಬಿನ ಪೀಠ ನನಗೆ ಅಂಟಿದೆಯೆಂದು
ಒಣನೆಪವು ಎಳೆಯಿತದು ಬಿಡು ಭರದಲಿ
ಪಂಚಬಾಣನ ಮಿತ್ರ ಯುದ್ಧಸಾರುವ ಹೊತ್ತು
ಪೂರ್ಣ ಚಂದಿರನೊಳಗೆ ಕೋಲಾಹಲ
ಪಚ್ಚೆಪಸರಿದ ಬಯಲು ಎದೆಗೆ ಬಾಣವನಿತ್ತು
ಪ್ರಾಣ ಬೇಡಲು ನೆನಪು ದಾವಾನಲ
ರಾಜಕಾರಣ ಬೇಡ ರಾಜ್ಯಭಾರವು ಬೇಡ
ರಾಧೆ, ನಿನ್ನಯ ಪ್ರೇಮವೊಂದು ಸಿಗಲಿ
ರಾಶಿ ಹೊನ್ನೂ ಬೇಡ ರಾಯತನವೂ ಬೇಡ
ರಾಧೆ, ಯಮುನೆಯ ತಟವು ನಮಗೆ ಇರಲಿ
(೧೬-ಎಪ್ರಿಲ್-೨೦೦೯)
ರಮಿಸಿ ಕಾಡಿದ ನನಗೆ ಏನಾಯಿತೋ
ರಾಧೆಯಾ ನೆರಳಿರದೆ ಗೆಜ್ಜೆಯಾ ದನಿಯಿರದೆ
ರಂಗಿನಾಟದ ಹುರುಪು ಹಾಳಾಯಿತೋ
ಕಿರಿಯನೆಂದೆಲ್ಲರೂ ಹಿರಿತನವನಾಡುತ್ತ
ಕೀಟಲೆಯನಾಡ್ಯಾಡಿ ಕೆಣಕುತಿರಲು
ಕಿನ್ನರಿಯ ಲೀಲೆಯಲಿ ಪ್ರೀತಿಯಲಿ ಕಾಯುತ್ತ
ಕಿಂಕಿಣಿಯನಾಡಿ ನೀ ಮನವ ಗೆಲಲು
ಹಾಲುಮೊಸರನು ಮೆಚ್ಚಿ ಬೆಣ್ಣೆಬೆಟ್ಟವನೆತ್ತಿ
ಹಸುಮಂದೆಯಲಿ ಕರುಗಳೊಡನಾಡುತ
ಹಾಲಾಹಲವ ಸುರಿವ ಹಾವ ಹೆಡೆಯನು ಮೆಟ್ಟಿ
ಹಾಡಿ ಆಡಿದ ನನ್ನ ಜೀವ ಗೆಣತಿ
ಮಾವ ಕರೆದನು ಎಂದು ಮನೆಯ ತೊರೆದೆನು ಅಂದು
ಮರೆಯುವೆನು ಹೇಗೆ ನಾ ಮನದಂಗಳ
ಮಾಳಿಗೆಯಲೇ ನಿಂದು ಪರದೆ ಹಿಂದೆಯೆ ನೊಂದು
ಮಾತು ಮರೆಸಿದೆ, ತುಳುಕಿಸದೆ ಕಂಗೊಳ
ಒಮ್ಮೆಯಾದರು ಬಂದು ನಿನ್ನ ಕಾಂಬೆನು ಎಂದು
ಒಂದಾಸೆ ಹೊತ್ತಿದ್ದೆ ಅರಮನೆಯಲಿ
ಒರಗುದಿಂಬಿನ ಪೀಠ ನನಗೆ ಅಂಟಿದೆಯೆಂದು
ಒಣನೆಪವು ಎಳೆಯಿತದು ಬಿಡು ಭರದಲಿ
ಪಂಚಬಾಣನ ಮಿತ್ರ ಯುದ್ಧಸಾರುವ ಹೊತ್ತು
ಪೂರ್ಣ ಚಂದಿರನೊಳಗೆ ಕೋಲಾಹಲ
ಪಚ್ಚೆಪಸರಿದ ಬಯಲು ಎದೆಗೆ ಬಾಣವನಿತ್ತು
ಪ್ರಾಣ ಬೇಡಲು ನೆನಪು ದಾವಾನಲ
ರಾಜಕಾರಣ ಬೇಡ ರಾಜ್ಯಭಾರವು ಬೇಡ
ರಾಧೆ, ನಿನ್ನಯ ಪ್ರೇಮವೊಂದು ಸಿಗಲಿ
ರಾಶಿ ಹೊನ್ನೂ ಬೇಡ ರಾಯತನವೂ ಬೇಡ
ರಾಧೆ, ಯಮುನೆಯ ತಟವು ನಮಗೆ ಇರಲಿ
(೧೬-ಎಪ್ರಿಲ್-೨೦೦೯)
Labels:
ರಮ್ಯಗಾನ...,
ಹೀಗೇ ಸಾಗಲಿ,
ಹೊಚ್ಚ ಹೊಸದು
Subscribe to:
Posts (Atom)